ಮಳೆ ವರದಿ: ಜಿಲ್ಲೆಯಲ್ಲಿ ಮೂರು ತಾಲೂಕುಗಳಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಾಗುತ್ತಿದೆ (Heavy Rainfall). ಹೊಸನಗರ, ಸಾಗರ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ. ತೀರ್ಥಹಳ್ಳಿಯಲ್ಲಿ ಜೋರು ಮಳೆಯಾಗುತ್ತಿದೆ.
ಸಾಗರ ತಾಲೂಕಿನ ಕಾಂಡಿಕೆ, ಕಲ್ಮನೆ, ಕೋಳೂರು, ಭೀಮನಕೋಣೆ, ಭೀಮನೇರಿ, ಮಾಲ್ವೆ, ಕೆಳದಿ ಭಾಗದಲ್ಲಿ ವಿಪರೀತ ಮಳೆಯಾಗುತ್ತಿದೆ. ಇತ್ತ ಹೊಸನಗರ ತಾಲೂಕಿನ ಮಾರುತಿಪುರ, ಕೋಡೂರು, ಮುಂಬಾರು, ಮೇಲಿನಬೆಸಿಗೆ, ಹೊಸೂರು ಸಂಪೆಕಟ್ಟೆ ಭಾಗದಲ್ಲಿಯು ಭಾರಿ ಸುರಿಯುತ್ತಿದೆ.
ತೀರ್ಥಹಳ್ಳಿ ತಾಲೂಕಿನ ದೇಮ್ಲಾಪುರ, ಆರಗ, ನೆರಟೂರು, ಹೊಸಹಳ್ಳಿ, ಅರೆಹಳ್ಳಿ, ಹೊನ್ನೇತಾಳು, ಬಿದರಗೋಡು, ಆಗುಂಬೆ ಭಾಗದಲ್ಲಿ ಜೋರು ಮಳೆಯಾಗುತ್ತಿದೆ. ಭಾಂಡ್ಯ ಕುಕ್ಕೆ, ತ್ರಯಂಬಕಪುರ, ತೂದೂರು ಭಾಗದಲ್ಲಿ ಸಾಧಾರಣದಿಂದ ಜೋರು ಮಳೆಯಾಗುತ್ತಿದೆ.
ಶಾಲೆ, ಕಾಲೇಜುಗಳಿಗೆ ರಜೆ
ಭಾರಿ ಮತ್ತು ನಿರಂತರ ಮಳೆ, ಜೋರು ಗಾಳಿಯ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಹೊಸನಗರ ಮತ್ತು ಸಾಗರ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ಗಳು ಆದೇಶಿಸಿದ್ದಾರೆ. ಇನ್ನೊಂದೆಡೆ ಹೊನ್ನೇತಾಳು ಸರ್ಕಾರಿ ಪ್ರಾಥಮಿಕ ಶಾಲೆಗೆ ಎಸ್ಡಿಎಂಸಿಯೇ ರಜೆ ಘೋಷಿಸಿದೆ.
ಇದನ್ನೂ ಓದಿ » ಜೋರು ಮಳೆ, ಇವತ್ತು ಎರಡು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200