ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಹೊಸನಗರದ ನಗರ ಮತ್ತು ಚಿಕ್ಕಪೇಟೆ ನಡುವೆ ಇರುವ ಸೇತುವೆ ಕುಸಿದಿದೆ. ಇತ್ತ ತೀರ್ಥಹಳ್ಳಿಯ ಭಾರತೀಪುರ ತಿರುವಿನಲ್ಲಿ ರಸ್ತೆ ಕುಸಿತ ಉಂಟಾಗಿದೆ. ಆದ್ದರಿಂದ ಈ ಮಾರ್ಗಗಳಲ್ಲಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಹೊಸನಗರದಿಂದ ನಗರ – ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 (ಸಿ) ರಲ್ಲಿ ಸೇತುವೆ ಕುಸಿದಿದೆ. ನಗರ – ಚಿಕ್ಕಪೇಟೆ ರಸ್ತೆಯಲ್ಲಿ ಈ ಸೇತುವೆ ಇದೆ. ಇತ್ತ ಶಿವಮೊಗ್ಗ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತೀಪುರ ತಿರುವಿನಲ್ಲಿ ರಸ್ತೆ ಕುಸಿತ ಉಂಟಾಗಿದೆ.
ಹಾಗಾಗಿ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅಲ್ಲದೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.

ಪರ್ಯಾಯ ಮಾರ್ಗ ಯಾವುದು?
ಪರ್ಯಾಯ ಮಾರ್ಗ 1 – ಶಿವಮೊಗ್ಗ ಮಾರ್ಗದಿಂದ ಕುಂದಾಪುರ ಮತ್ತು ಕುಂದಾಪುರದಿಂದ-ಶಿವಮೊಗ್ಗಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಸಾಗರ-ಹೊನ್ನಾವರ (ಎನ್ಹೆಚ್69) ಮಾರ್ಗದಲ್ಲಿ ಸಂಚರಿಸಬಹುದು.
ಪರ್ಯಾಯ ಮಾರ್ಗ 2 – ಶಿವಮೊಗ್ಗದಿಂದ ಉಡುಪಿ-ಮಂಗಳೂರು ಮತ್ತು ಮಂಗಳೂರಿನಿಂದ ಉಡುಪಿ ಶಿವಮೊಗ್ಗಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಕೊಪ್ಪ-ಕಾರ್ಕಳ-ಮಂಗಳೂರು (ಎಸ್ಹೆಚ್ 57, 65 ಮತ್ತು ಎನ್ಹೆಚ್ 169ರಲ್ಲಿ) ಮಾರ್ಗದಲ್ಲಿ ಸಂಚರಿಸಬಹುದು.
ಪರ್ಯಾಯ ಮಾರ್ಗ 3 – ಶಿವಮೊಗ್ಗದಿಂದ ಕುಂದಾಪುರಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಹೊಸನಗರ-ಹುಲಿಕಲ್ ಘಾಟ್-ಸಿದ್ದಾಪುರ-ಕುಂದಾಪುರ ಮಾರ್ಗದಲ್ಲಿ ಸಂಚರಿಸುವುದು.
ಪರ್ಯಾಯ ಮಾರ್ಗ 4 – ಶಿವಮೊಗ್ಗದಿಂದ ಮಂಗಳೂರಿಗೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ನರಸಿಂಹರಾಜಪುರ-ಕೊಪ್ಪ-ಶೃಂಗೇರಿ-ಕಾರ್ಕಳ-ಮಂಗಳೂರು ತಲುಪಬಹುದಾಗಿದೆ.
ನಗರ – ಚಿಕ್ಕಪೇಟೆ ನಡುವಿನ ಸೇತುವೆ ಮತ್ತು ಭಾರತೀಪುರ ತಿರುವಿನಲ್ಲಿ ರಸ್ತೆ ರಿಪೇರಿ ಕಾರ್ಯ ಮುಗಿಯುವವರೆಗೆ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಆದೇಶಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






