Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » 12 ಅಡಿ ಉದ್ದದ ಕಾಳಿಂಗ ಸರ್ಪಕ್ಕೆ ಶಸ್ತ್ರಚಿಕಿತ್ಸೆ, ನಾಲ್ಕು ದಿನ ಆರೈಕೆ

12 ಅಡಿ ಉದ್ದದ ಕಾಳಿಂಗ ಸರ್ಪಕ್ಕೆ ಶಸ್ತ್ರಚಿಕಿತ್ಸೆ, ನಾಲ್ಕು ದಿನ ಆರೈಕೆ

04/08/2023 10:26 AM
ನಿತಿನ್‌ ಕೈದೊಟ್ಲು

SHIVAMOGGA LIVE | 4 AUGUST 2023

THIRTHAHALLI : ಗಾಯಗೊಂಡಿದ್ದ 12‌ ಅಡಿ ಉದ್ದದ ಕಾಳಿಂಗ ಸರ್ಪವನ್ನು (King Cobra) ರಕ್ಷಿಸಿ, ಶಾಸ್ತ್ರಚಿಕಿತ್ಸೆ ಬಳಿಕ ಕಾಡಿಗೆ ಬಿಡಲಾಗಿದೆ. ಇದರ ವಿಡಿಯೋವನ್ನು ಕಾಳಿಂಗ ಫೌಂಡೇಶನ್‌ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪ್ರಕಟಿಸಿದೆ.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

kalinga foundation thirthahalli guddekeri agumbe

ಕಮ್ಮರಡಿಯ ಮನೆಯೊಂದರ ಬಳಿ ಕಾಳಿಂಗ ಸರ್ಪ (King Cobra) ಕಾಣಿಸಿಕೊಂಡಿತ್ತು. ಮಾಹಿತಿ ಲಭಿಸುತ್ತಿದ್ದಂತೆ ಕಾಳಿಂಗ ಫೌಂಡೇಶನ್‌ ಸದಸ್ಯರು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಆಗ ಕಾಳಿಂಗ ಸರ್ಪ ಗಾಯಗೊಂಡಿರುವ ವಿಚಾರ ಗೊತ್ತಾಗಿದೆ.

ಗಾಯಗೊಂಡಿದ್ದ ಕಾಳಿಂಗ ಸರ್ಪ ರಕ್ಷಣೆ

ಶಿವಮೊಗ್ಗ ಲೈವ್.ಕಾಂ ಜೊತೆ ಮಾತನಾಡಿದ ಕಾಳಿಂಗ ಫೌಂಡೇಶನ್‌ ವ್ಯವಸ್ಥಾಪಕ ಪ್ರಶಾಂತ್‌, ‘ಮನೆಯೊಳಗೆ ಹಾವು ಸೇರಿದ್ದರೆ ಮಾತ್ರ ಅದನ್ನು ರಕ್ಷಿಸಿ ಕಾಡಿಗೆ ಬಿಡುತ್ತೇವೆ. ಆದರೆ ಕಮ್ಮರಡಿಯಲ್ಲಿ ಮನೆಯ ಪಕ್ಕದಲ್ಲಿ ಹಾವು ಕಾಣಿಸಿಕೊಂಡಿತ್ತು. ಮನೆಯಲ್ಲಿ ಮಕ್ಕಳಿದ್ದಾರೆ ಎಂದು ತಿಳಿಸಿದ್ದರಿಂದ ಸ್ಥಳಕ್ಕೆ ತೆರಳಿ ಪರಿಶೀಲಿಸಿದೆವು. ಆಗ ಕಾಳಿಂಗ ಸರ್ಪಕ್ಕೆ ಗಾಯವಾಗಿರುವ ವಿಚಾರ ಗೊತ್ತಾಯಿತು. ಕೂಡಲೆ ಅದನ್ನು ಹಿಡಿದು ಮೇಗರವಳ್ಳಿ ವಲಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ತಿಳಿಸಲಾಯಿತು. ಮರುದಿನ ಬೆಳಗ್ಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತುʼ ಎಂದು ತಿಳಿಸಿದರು.

PARISHRAMA neet academy

ಕಾಳಿಂಗ ಸರ್ಪಕ್ಕೆ ಆಪರೇಷನ್‌

ಗಾಯಗೊಂಡಿದ್ದರಿಂದ ಕಾಳಿಂಗ ಸರ್ಪವನ್ನು ತೀರ್ಥಹಳ್ಳಿಗೆ ತರಲು ಸಾಧ್ಯವಿರಲಿಲ್ಲ. ಹಾಗಾಗಿ ಗುಡ್ಡೇಕೇರಿಯಲ್ಲಿರುವ ಕಾಳಿಂಗ ಫೌಂಡೇಶನ್‌ಗೆ ತೆರಳಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಅನಸ್ತೇಷಿಯ ಕೊಟ್ಟು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಮೂರ್ನಾಲ್ಕು ದಿನದ ಆರೈಕೆ ಬಳಿಕ ಕಾಡಿಗೆ ಬಿಡುವಂತೆ ಸೂಚನೆ ನೀಡಿದೆಡಾ.ಯುವರಾಜ ಹೆಗಡೆ ಮೇಗರವಳ್ಳಿ, ಪಶುವೈದ್ಯ

ಆರೈಕೆ ಬಳಿಕ ಕಾಡಿಗೆ ಕಾಳಿಂಗ

ಶಸ್ತ್ರಚಿಕಿತ್ಸೆ ಬಳಿಕ ಕಾಳಿಂಗ ಫೌಂಡೇಶನ್‌ನಲ್ಲಿಯೇ ಕಾಳಿಂಗ ಸರ್ಪಕ್ಕೆ ಆರೈಕೆ ಮಾಡಲಾಗಿದೆ. ಗಾಯ ಮಾಗುವ ವಾತಾವರಣ ಸೃಷ್ಟಿಸಿ, ನಿತ್ಯ ಪರಿಶೀಲನೆ ನಡೆಸಲಾಯಿತು. ಮೂರ್ನಾಲ್ಕು ದಿನದ ಬಳಿಕ ಆರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಕಾಳಿಂಗ ಸರ್ಪವನ್ನು ಅರಣ್ಯಕ್ಕೆ ಬಿಡಲಾಗಿದೆ. ಇದರ ವಿಡಿಯೋವನ್ನು ಕಾಳಿಂಗ ಫೌಂಡೇಶನ್‌ ತನ್ನ ಇನ್‌ಸ್ಟ್ರಾಗ್ರಾಂ ಖಾತೆಯಲ್ಲಿ ಪ್ರಕಟಿಸಿದೆ. ಜನರು ಕಾಳಿಂಗ ಫೌಂಡೇಶನ್‌ ಮತ್ತು ವೈದ್ಯರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

 

View this post on Instagram

 

A post shared by KalingaCRE (@kalingacre)

ಏನಿದು ಕಾಳಿಂಗ ಫೌಂಡೇಶನ್‌?

ಆಗುಂಬೆ ಸಮೀಪದ ಗುಡ್ಡೇಕೇರಿಯಲ್ಲಿ ಕಾಳಿಂಗ ಸೆಂಟರ್‌ ಫಾರ್‌ ರೈನ್‌ಫಾರೆಸ್ಟ್‌ ಇಕಾಲಜಿ ಎಂಬ ಸಂಸ್ಥೆ ಇದೆ. ಹರ್ಪಿಟಾಲಜಿಸ್ಟ್‌ ಪಿ. ಗೌರಿ ಶಂಕರ್‌ ಅವರು ಈ ಸಂಸ್ಥೆ ಆರಂಭಿಸಿದ್ದಾರೆ. ಕಾಳಿಂಗ ಸರ್ಪದ ಕುರಿತು ಸಂಶೋಧನೆ, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಆಸಕ್ತರು ಸಂಸ್ಥೆಗೆ ಭೇಟಿ ನೀಡಿ ಕಾಳಿಂಗ ಸರ್ಪದ ಕುರಿತು ಕುತೂಹಲಕರ ಮಾಹಿತಿ ಪಡೆಯಬಹುದಾಗಿದೆ. ವನ್ಯಜೀವಿ ವಲಯದಲ್ಲಿ ಕಾಳಿಂಗ ಫೌಂಡೇಷನ್‌ಗೆ ವಿಶೇಷ ಹೆಸರಿದೆ.

ಇದನ್ನೂ ಓದಿ – 25 ಕೆ.ಜಿ ಅಕ್ಕಿ, 5 ಕೆ.ಜಿ ಟೊಮೆಟೊ, ದಿನಸಿ ಪೂರೈಸುವಂತೆ ಪ್ರಾಂಶುಪಾಲರಿಗೆ ಅತಿಥಿ ಉಪನ್ಯಾಸಕರ ಮನವಿ, ಕಾರಣವೇನು?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Trax-and-KSRTC-Mishap-at-Shimoga-Bhadravathi-Road ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಅಪಘಾತ, ತಪ್ಪಿದ ದೊಡ್ಡ ಅನಾಹುತ
Next Article -ksrtc-upside-at-Ulluru-in-Sagara-taluk-Shimoga-road-BH-Road. ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ, ತಪ್ಪಿತು ದೊಡ್ಡ ಅನಾಹುತ, ಘಟನೆಗೆ ಕಾರಣವೇನು?

ಇದನ್ನೂ ಓದಿ

tree-falls-to-agumbe-road-in-Thirthahalli.
THIRTHAHALLI

ಆಗುಂಬೆ ಘಾಟಿ ಸಮೀಪ ಧರೆಗುರುಳಿದ ಮರ, ಕೆಲಕಾಲ ಹೆದ್ದಾರಿ ಬಂದ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
agumbe-ghat-road-during-rainy-season
HOSANAGARASAGARATHIRTHAHALLI

ಹೊಸನಗರ, ಸಾಗರದಲ್ಲಿ ಭಾರಿ ಮಳೆ, ಆಗುಂಬೆ ಭಾಗದಲ್ಲಿ ಬಿಡುವು ಕೊಡದ ವರ್ಷಧಾರೆ, ಎಲ್ಲೆಲ್ಲಿ ಜೋರು ಮಳೆಯಾಗ್ತಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
AGUMBE-GHAT-THIRTHAHALLI.
THIRTHAHALLI

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಎಷ್ಟು ದಿನ? ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/06/2025
Truck-problem-at-Agumbe-Ghat
THIRTHAHALLI

ಆಗುಂಬೆ ಘಾಟಿ ತಿರುವಿನಲ್ಲೇ ಕೆಟ್ಟು ನಿಂತ ಕ್ಯಾಂಟರ್‌, ಟ್ರಾಫಿಕ್‌ ಜಾಮ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
mimicry-artist-Viju-Vanadanappally-no-more
THIRTHAHALLI

ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
Truck-and-pickup-mishap-at-gabadi-in-Thirthahalli-
THIRTHAHALLI

ತೀರ್ಥಹಳ್ಳಿ – ಶಿವಮೊಗ್ಗ ಹೆದ್ದಾರಿಯಲ್ಲಿ ಟಿಪ್ಪರ್‌, ಪಿಕ್‌ಅಪ್‌ ವಾಹನ ಡಿಕ್ಕಿ, ಟಿಪ್ಪರ್‌ ಪಲ್ಟಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?