ಹಣಗೆರೆ ಕಟ್ಟೆ, ಕಾಣಿಕೆ ಹಣ ಎಣಿಕೆಯಲ್ಲಿ ದೊಡ್ಡ ಮೋಸ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

THIRTHAHALLI NEWS, 10 NOVEMBER 2024 : ಹಣಗೆರೆಯ ಹಜರತ್ ಸೈಯದ್‌ ಸಾದತ್‌ ದರ್ಗಾ ಮತ್ತು ಭೂತರಾಯ ಚೌಡೇಶ್ವರಿ ದೇವಸ್ಥಾನದಲ್ಲಿ ಗುರುವಾರ ನಡೆದ ಹುಂಡಿ ಎಣಿಕೆ ಹಣದಲ್ಲಿ (Money) ಮೋಸವಾಗಿದ್ದು, ಈ ಕುರಿತು ಧಾರ್ಮಿಕ ಪರಿಷತ್‌ ಆಡಳಿತ ಮಂಡಳಿಯು ತಹಶೀಲ್ದಾರ್‌ಗೆ ದೂರು ಸಲ್ಲಿಸಿದ್ದರಿಂದ ಶುಕ್ರವಾರ ಮರು ಎಣಿಕೆ ನಡೆಯಿತು.

ಕಂತೆಯಲ್ಲಿ ಹೆಚ್ಚುವರಿ ನೋಟು

ವಾರ್ಷಿಕ 2 ಕೋಟಿಗೂ ಹೆಚ್ಚು ಆದಾಯ ಹೊಂದಿರುವ ಧಾರ್ಮಿಕ ಕೇಂದ್ರದಲ್ಲಿ ತ್ರೈಮಾಸಿಕ ಸರಾಸರಿ 50 ಲಕ್ಷ ರೂ.ಗು ಹೆಚ್ಚು ಮೊತ್ತ ಕಾಣಿಕೆ ರೂಪದಲ್ಲಿ ಸಂಗ್ರಹವಾಗುತ್ತದೆ. ಗುರುವಾರ ಎಂದಿನಂತೆ ಹುಂಡಿ ಎಣಿಕೆ ನಡೆದಿದ್ದು, ಲಕ್ಷ ರೂ. ನೋಟಿನ ಕಂತೆಯಲ್ಲಿ ಹೆಚ್ಚುವರಿ ನೋಟುಗಳು ಪತ್ತೆಯಾಗಿದ್ದವು. ಅದನ್ನು ಗಮನಿಸಿದ ಆಡಳಿತ ಮಂಡಳಿ ತಹಶೀಲ್ದಾರ್‌ಗೆ ದೂರು ನೀಡಿದೆ.

Hanagere-Katte-Kanike-amount-in-Thirthahalli

ರಾತ್ರಿ ಆಡಳಿತ ಮಂಡಳಿ – ಕಂದಾಯ ಅಧಿಕಾರಿಗಳ ನಡುವೆ ವಾಗ್ವಾದ ನಡೆದ ಬಳಿಕ ಸಂಗ್ರಹವಾದ ಹಣವನ್ನು ಬಿಗಿ ಬಂದೋಬಸ್ತ್‌ನಲ್ಲಿ ತಾಲ್ಲೂಕು ಕಚೇರಿಯ ಖಜಾನೆಯಲ್ಲಿ ಇರಿಸಲಾಗಿತ್ತು.

ಮರು ಎಣಿಕೆಯಲ್ಲಿ ಹೆಚ್ಚುವರಿ ಹಣ ಪತ್ತೆ

ಶುಕ್ರವಾರ ತಹಶೀಲ್ದಾರ್‌, ಡಿವೈಎಸ್‌ಪಿ ಬಂದೋಬಸ್ತ್‌ನಲ್ಲಿ ಪುನಃ ಧಾರ್ಮಿಕ ಕೇಂದ್ರಕ್ಕೆ ಹಣ ರವಾನಿಸಿ ಎಣಿಕೆ ಮಾಡಲಾಯಿತು. ಒಟ್ಟು  66,04,950 ರೂ. ಮೊತ್ತ ಕಾಣಿಕೆ ರೂಪದಲ್ಲಿ ದೇವಸ್ಥಾನಕ್ಕೆ ಸಂದಾಯವಾಗಿದೆ. ಹಣದ ಕಂತೆಯಲ್ಲಿ ಹೆಚ್ಚುವರಿ 77,930 ರೂ. ಸೇರಿಸಿ ಅದನ್ನು ಲಪಟಾಯಿಸಲು ಪ್ರಯತ್ನಿಸಿರುವುದು ಗೊತ್ತಾಗಿದೆ. 

ಕಾಣಿಕೆ ಹಣ ಎಣಿಕೆ ಕಾರ್ಯ ಮುಕ್ತಾಯದ ಹಂತದಲ್ಲಿ ನಮಗೆ ಅನುಮಾನ ಬಂದು ಒಂದೆರಡು ಕಂತೆಯನ್ನು ಮರು ಎಣಿಕೆ ಮಾಡಿಸಿದೆವು. ಆಗ ವ್ಯತ್ಯಾಸ ಕಂಡು ಬಂದಿದೆ. ರಾತ್ರಿ ವಿಳಂಬವಾಗಿದ್ದರಿಂದ ತಾಲೂಕು ಖಜಾನೆಯಲ್ಲಿ ಹಣ ಇರಿಸಿದ್ದೆವು. ಪುನಃ ಎಣಿಕೆ ಮಾಡಿದಾಗ 77,930 ಹೆಚ್ಚುವರಿ ಹಣ ಬಂದಿದೆ. ಮುಂದಿನ ಕ್ರಮ ಕೈಗೊಳ್ಳುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ತಹಶೀಲ್ದಾರ್‌ ಮೂಲಕ ಶಿಫಾರಸು ಪತ್ರ ಕಳುಹಿಸುತ್ತಿದ್ದೇವೆ.

ರಾಮಪ್ಪ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ

RED-LINE-

ಈ ಸಂಬಂಧ ತಹಶೀಲ್ದಾರ್‌ ತನಿಖೆ ಆರಂಭಿಸಿದ್ದು, ಪ್ರಕರಣ ವಿವಾದಕ್ಕೆ ತಿರುಗಿದೆ. ಆಡಳಿತ ಮಂಡಳಿಯು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಿಗೆ ದೂರು ನೀಡಲು ನಿರ್ಧರಿಸಿದೆ.

ಇದನ್ನೂ ಓದಿ » ಶಿವಮೊಗ್ಗಕ್ಕೆ ಮತ್ತೊಂದು ಕಾರು ಶೋ ರೂಂ, ಮಲೆನಾಡಿಗೆ ಇಸೂಝು ಎಂಟ್ರಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 10, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment