ಶಿವಮೊಗ್ಗ ಲೈವ್.ಕಾಂ | THIRTHAHALLI | 23 ಅಕ್ಟೋಬರ್ 2019
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರ ವೈಫಲ್ಯ ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಅ.25ಕ್ಕೆ ಆಗುಂಬೆಯಿಂದ ಮೇಗರವಳ್ಳಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಆ ದಿನ ಬೆಳಗ್ಗೆ 8 ಗಂಟೆಗೆ ಮಾಜಿ ಶಾಸಕ ಕಡಿದಾಳು ದಿವಾಕರ್ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಡುಕೋಣ, ಮಂಗಗಳು, ಕಾಡಾನೆ ಸೇರಿದಂತೆ ಕಾಡುಪ್ರಾಣಿಗಳ ಉಪಟಳದಿಂದ ರೈತರು ಕಂಗೆಟ್ಟು ಹೋಗಿದ್ದಾರೆ. ಈ ನಡುವೆ ಅತಿವೃಷ್ಟಿಯಿಂದಾಗಿ ಇನ್ನಷ್ಟು ಸಮಸ್ಯೆ ಅನುಭವಿಸುವಂತಾಗಿದೆ. ಆದರೆ ಈವರೆಗು ಆಗುಂಬೆ ಭಾಗದಲ್ಲಿ ನೆರೆ ಪರಿಹಾರ ಸೇರಿದಂತೆ ಯಾವುದೆ ಅಭಿವೃದ್ಧಿ ಕಾಮಗಾರಿಗಳು ಆಗಿಲ್ಲ. ಇದನ್ನು ವಿರೋಧಿಸಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.
ಕೆಸ್ತೂರು ಮಂಜುನಾಥ್, ಬಾಳೇಹಳ್ಳಿ ಪ್ರಭಾಕರ್, ಡಿ.ಲಕ್ಷ್ಮಣ್, ಹಾರೋಗುಳಿಗೆ ಪದ್ಮನಾಭ, ಹಸಿರುಮನೆ ಮಹಾಬಲೇಶ, ಜಯಪ್ರಕಾಶ್ ಶೆಟ್ಟಿ, ವೀರಾ ಗಿರೀಶ್ ಅವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





