ಆಗುಂಬೆಯಿಂದ ಮೇಗರವಳ್ಳಿವರೆಗೆ ಪಾದಯಾತ್ರೆ, ಶಾಸಕ ಆರಗ ಜ್ಞಾನೇಂದ್ರ ವೈಫಲ್ಯ ವಿರುದ್ಧ ಕಿಮ್ಮನೆ ರತ್ನಾಕರ್ ಆಕ್ರೋಶ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | THIRTHAHALLI | 23 ಅಕ್ಟೋಬರ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಅವರ ವೈಫಲ್ಯ ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

THIRTHAHALLI 200 X 200

ಅ.25ಕ್ಕೆ ಆಗುಂಬೆಯಿಂದ ಮೇಗರವಳ್ಳಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಆ ದಿನ ಬೆಳಗ್ಗೆ 8 ಗಂಟೆಗೆ ಮಾಜಿ ಶಾಸಕ ಕಡಿದಾಳು ದಿವಾಕರ್ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾಡುಕೋಣ, ಮಂಗಗಳು, ಕಾಡಾನೆ ಸೇರಿದಂತೆ ಕಾಡುಪ್ರಾಣಿಗಳ ಉಪಟಳದಿಂದ ರೈತರು ಕಂಗೆಟ್ಟು ಹೋಗಿದ್ದಾರೆ. ಈ ನಡುವೆ ಅತಿವೃಷ್ಟಿಯಿಂದಾಗಿ ಇನ್ನಷ್ಟು ಸಮಸ್ಯೆ ಅನುಭವಿಸುವಂತಾಗಿದೆ. ಆದರೆ ಈವರೆಗು ಆಗುಂಬೆ ಭಾಗದಲ್ಲಿ ನೆರೆ ಪರಿಹಾರ ಸೇರಿದಂತೆ ಯಾವುದೆ ಅಭಿವೃದ್ಧಿ ಕಾಮಗಾರಿಗಳು ಆಗಿಲ್ಲ. ಇದನ್ನು ವಿರೋಧಿಸಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.

ಕೆಸ್ತೂರು ಮಂಜುನಾಥ್, ಬಾಳೇಹಳ್ಳಿ ಪ್ರಭಾಕರ್, ಡಿ.ಲಕ್ಷ್ಮಣ್, ಹಾರೋಗುಳಿಗೆ ಪದ್ಮನಾಭ, ಹಸಿರುಮನೆ ಮಹಾಬಲೇಶ, ಜಯಪ್ರಕಾಶ್ ಶೆಟ್ಟಿ, ವೀರಾ ಗಿರೀಶ್ ಅವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment