SHIVAMOGGA LIVE NEWS | 15 JULY 2024
THIRTHAHALLI : ಧರೆ ಕುಸಿದು ಬೈಪಾಸ್ ರಸ್ತೆ (Bypass Road) ಮೇಲೆ ಮಣ್ಣು ಬಿದ್ದಿದ್ದರಿಂದ ತಾತ್ಕಾಲಿಕವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ತೀರ್ಥಹಳ್ಳಿಯ ಕುರುವಳ್ಳಿ – ಬಾಳೆಬೈಲು ನಡುವೆ ರಾಷ್ಟ್ರೀಯ ಹೆದ್ದಾರಿ 169ಎ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ.
ವಿಚಾರ ತಿಳಿದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜೆಸಿಬಿ ಬಳಸಿ ಮಣ್ಣು ತೆರವು ಕಾರ್ಯಾಚರಣೆ ನಡೆಸಿದರು. ಇನ್ನು, ತೀರ್ಥಹಳ್ಳಿಯಲ್ಲಿ ಮಳೆ ಮುಂದುವರೆದಿದ್ದು, ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಹಾಗಾಗಿ ಸದ್ಯ ಈ ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
2023ರಲ್ಲಿ 57 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಬದಲಿ ಸೇತುವೆ ಮಾರ್ಗ ಇದಾಗಿದೆ. ಸದ್ಯ ಬೈಪಾಸ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಿರುವುದರಿಂದ ಕುರುವಳ್ಳಿ ಮತ್ತು ಬಾಳೆಬೈಲು ನಡುವೆ ಸಂಚರಿಸುವ ವಾಹನಗಳು ತೀರ್ಥಹಳ್ಳಿ ಪಟ್ಟಣದ ಮೂಲಕ ಸಂಚರಿಸಬೇಕಿದೆ.
ಇದನ್ನೂ ಓದಿ ⇓
ಬ್ಯಾಂಕಿಂಗ್ ಪರೀಕ್ಷೆ, ಶಿವಮೊಗ್ಗದಲ್ಲಿ ಒಂದು ದಿನದ ಕಾರ್ಯಾಗಾರ, ಹೆಸರು ನೋಂದಾಯಿಸಲು ಅವಕಾಶ, ಇಲ್ಲಿದೆ ಮಾಹಿತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200