SHIVAMOGGA LIVE NEWS | 17 JULY 2024
THIRTHAHALLI : ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ (Bypass Road) ಮತ್ತೊಂದು ಬದಿಯಲ್ಲಿ ಭೂಕುಸಿತ ಉಂಟಾಗಿದೆ. ಭಾರಿ ಪ್ರಮಾಣದ ಮಣ್ಣು ರಸ್ತೆಗೆ ಬಿದ್ದಿದೆ. ಗುಡ್ಡದ ಮೇಲಿದ್ದ ಮಾವಿನ ಮರ ಉರುಳಿ ಬಿದ್ದಿದೆ.
ಇದೇ ಬೈಪಾಸ್ನಲ್ಲಿ ಸೋಮವಾರ ಭೂಕುಸಿತ ಉಂಟಾಗಿತ್ತು. ಮಂಗಳವಾರ ಹೆದ್ದಾರಿಯ ತಡೆಗೋಡೆ ಕುಸಿದಿತ್ತು. ಮಣ್ಣು ಪೂರ್ತಿಯಾಗಿ ಬೈಪಾಸ್ ರಸ್ತೆಗೆ ಬಂದಿತ್ತು. ಈ ಮೊದಲು ಭೂ ಕುಸಿತ ಸಂಭವಿಸಿದ ಸ್ಥಳದ ಎದುರು ಭಾಗದಲ್ಲಿ ಭೂ ಕುಸಿತ ಉಂಟಾಗಿದೆ. ಇದರಿಂದ ಕಾಮಗಾರಿ ಕುರಿತು ಪ್ರಶ್ನೆ ಏಳುವಂತೆ ಮಾಡಿದೆ.
ಮಂಗಳವಾರ ಬೆಳಗಿನ ಜಾವ ಎರಡನೇ ಬಾರಿ ಭೂ ಕುಸಿತ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೂಡಲೆ ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದರು.
ಇದನ್ನೂ ಓದಿ ⇓
ಆಗುಂಬೆ, ಮೇಗರವಳ್ಳಿಯಲ್ಲಿ ಭಾರಿ ಮಳೆ, ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200