ತೀರ್ಥಹಳ್ಳಿಯಿಂದ ವಿಧಾನಸೌಧಕ್ಕೆ ಪಾದಯಾತ್ರೆ, ನಾಳೆ ಶಿವಮೊಗ್ಗಕ್ಕೆ ಎಂಟ್ರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | THIRTHAHALLI NEWS |  30 ಡಿಸೆಂಬರ್ 2021

ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ತೀರ್ಥಹಳ್ಳಿಯಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಇವತ್ತು ಪಾದಯಾತ್ರೆ ಎರಡನೇ ದಿನ ಪೂರ್ಣಗೊಳಿಸಿದ್ದು, ನಾಳೆ ಶಿವಮೊಗ್ಗಕ್ಕೆ ಪ್ರವೇಶಿಸಲಿದೆ.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದ ವತಿಯಿಂದ ಪಾದಯಾತ್ರೆ ನಡೆಸಲಾಗುತ್ತಿದೆ. ತೀರ್ಥಹಳ್ಳಿಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಪಾದಯಾತ್ರೆಗೆ ಕಾರಣವೇನು?

ಸೇವಾ ಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಹಲವು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈತನಕ ಸರ್ಕಾರ ಯಾವುದೆ ಕ್ರಮ ಕೈಗೊಂಡಿಲ್ಲ. ಇತ್ತೀಚೆಗೆ ಅತಿಥಿ ಉಪನ್ಯಾಸಕ ಹರ್ಷಾ ಶಾನುಭೋಗ್ ಅವರು ಆರ್ಥಿಕ ಸಮಸ್ಯೆಯಿಂದಾಗಿ ನೊಂದು ಅತ್ಮಹತ್ಯೆ ಮಾಡಿಕೊಂಡಿದ್ದರು. ಹಾಗಾಗಿ ಸೇವಾ ಭದ್ರತೆ ಮತ್ತು ಹರ್ಷ ಶಾನುಭೋಗ್ ಕುಟುಂಬಕ್ಕೆ ನೆರವು ನೀಡಬೇಕು ಎಂದು ಆಗ್ರಹಿಸಿ ಪಾದಯಾತ್ರೆ ಆರಂಭಿಸಲಾಗಿದೆ.

ಯಾರೆಲ್ಲ ಪಾಲ್ಗೊಳ್ಳುತ್ತಿದ್ದಾರೆ?

ತೀರ್ಥಹಳ್ಳಿಯಿಂದ ವಿಧಾನಸೌಧದವರೆಗಿನ ಪಾದಯಾತ್ರೆಯಲ್ಲಿ ರಾಜ್ಯದ ವಿವಿಧೆಡೆಯ ಅತಿಥಿ ಉಪನ್ಯಾಸಕರು ಪಾಲ್ಗೊಳ್ಳಲಿದ್ದಾರೆ. ತೀರ್ಥಹಳ್ಳಿ, ಶಿವಮೊಗ್ಗದ ಅತಿಥಿ ಉಪನ್ಯಾಸಕರ ಜೊತೆಗೆ, ಕಲಬುರಗಿ, ಬೀದರ್, ಬಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪ, ಬಳ್ಳಾರಿ, ಚಿಕ್ಕಮಗಳೂರು, ಹಾವೇರಿ, ಉತ್ತರ ಕನ್ನಡ, ದಾವಣಗೆರೆ, ಹಾಸನ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಬಳ್ಳಾಪುರ, ವಿಜಯಪುರ, ಮಂಡ್ಯ, ತುಮಕೂರು, ಕೋಲಾರ, ರಾಮನಗರ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ಅತಿಥಿ ಉಪನ್ಯಾಸಕರು ಹಂತ ಹಂತವಾಗಿ ಪಾದಯಾತ್ರೆಯಲ್ಲಿ ಜೊತೆಯಾಗಲಿದ್ದಾರೆ.

ಯಡೂರಿನಿಂದ ಪಾದಯಾತ್ರೆ ಶುರು

ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕ ಹರ್ಷ ಶಾನುಭೋಗ್ ಅವರ ಮನೆಯಿಂದ ಪಾದಯಾತ್ರೆ ಆರಂಭಿಸಲಾಯಿತು. ಮಾಸ್ತಿಕಟ್ಟೆ ಸಮೀಪದ ಯಡೂರಿನಿಂದ ಪಾದಯಾತ್ರೆ ಶುರುವಾಗಿದೆ. ಮೊದಲ ದಿನ ಪಾದಯಾತ್ರೆ ತೀರ್ಥಹಳ್ಳಿ ತಲುಪಿತು. ಇವತ್ತು ತೀರ್ಥಹಳ್ಳಿಯಿಂದ ಮಂಡಗದ್ದೆವರೆಗೆ ಪಾದಯಾತ್ರೆ ನಡೆಯಿತು.

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಡಿ.31ರಂದು ಪಾದಯಾತ್ರೆ ಶಿವಮೊಗ್ಗಕ್ಕೆ ತಲುಪಲಿದೆ. ಮರುದಿನ ಶಿವಮೊಗ್ಗದಿಂದ ಭದ್ರಾವತಿವರೆಗೆ, ಬಳಿಕ ತರೀಕೆರೆ, ಕಡೂರು, ಬಾಣವರ, ಅರಸೀಕೆರೆ, ತಿಪಟೂರು, ಕೆ.ಬಿ.ಕ್ರಾಸ್, ಗುಬ್ಬಿ, ತುಮಕೂರು, ನಂದಿಗ್ರಾಮ, ನೆಲಮಂಗಲ, ಯಶವಂತಪುರ ತಲುಪಲಿದೆ. ಜನವರಿ 13ರಂದು ಪಾದಯಾತ್ರೆ ವಿಧಾನಸೌಧಕ್ಕೆ ತಲುಪಲಿದೆ.

ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿಗಳ ಬೆಂಬಲ

ಇವತ್ತು ತೀರ್ಥಹಳ್ಳಿಯಿಂದ ಮಂಡಗದ್ದೆವರೆಗೆ ಪಾದಯಾತ್ರೆ ನಡೆಯಿತು. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು, ಎಬಿವಿಪಿ ಸಂಘಟನೆಯ ಕಾರ್ಯಕರ್ತರು, ನಾಗರೀಕರು ಕೂಡ ಅತಿಥಿ ಉಪನ್ಯಾಸಕರ ಪಾದಯಾತ್ರೆಯಲ್ಲಿ ಜೊತೆಯಾದರು. ಸರ್ಕಾರ ಕೂಡಲೆ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆ, ತರಗತಿಗಳು ಸ್ಥಗಿತ

ರಾಜ್ಯದಲ್ಲಿ ಸುಮಾರು 14 ಸಾವಿರ ಅತಿಥಿ ಉಪನ್ಯಾಸರು ವಿವಿಧ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸೇವಾ ಭದ್ರತೆಗೆ ಆಗ್ರಹಿಸಿ ಕಳೆದ 20 ದಿನದಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ. ಅತಿಥಿ ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವುದರಿಂದ, ವಿದ್ಯಾರ್ಥಿಗಳಿಗೆ ಪಾಠಗಳು ಮುಂದುವರೆಯುತ್ತಿಲ್ಲ. ಪರೀಕ್ಷೆಗಳು ಹತ್ತಿರುವಾಗುತ್ತಿದ್ದರೂ ತರಗತಿ ನಡೆಯುದೆ ಶಿಕ್ಷಣ ವಂಚಿತರಾಗುತ್ತಿದ್ದಾರೆ.

AVvXsEj76BPYJLJJHCTa5Z5x78 MTeys8JwIDxqdCj d7A5gfa4URhzAHEqSfRzNOHXS1 D9ArTCpM1F4KupxAxku9HPRs3dyY9 wFH7bf7ZQrrQDclyX0fzpiphQa8sIaxCannRjEDg 0rqsdaPWayTbpcGHh9rF3nD6C Or0zIG8Kccoq9md2atVK38SqwGA=s926

ಬೆಳಗಾವಿ ಅಧಿವೇಶನದ ಸಂದರ್ಭ ಸುವರ್ಣ ವಿಧಾನಸೌಧದ ಮುಂದೆಯು ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದರು. ಆದರೆ ಇವರ ಬೇಡಿಕೆಗಳು ಈಡೇರಿಸುವತ್ತ ಸರ್ಕಾರ ಸದನದಲ್ಲಿ ಚರ್ಚೆ ನಡೆಸಲಿಲ್ಲ. ಇದೆ ಕಾರಣಕ್ಕೆ ಅತಿಥಿ ಉಪನ್ಯಾಸಕರು ನಿತ್ಯ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಅತಿಥಿ ಉಪನ್ಯಾಸಕ ಹರ್ಷ ಶಾನುಭೋಗ್ ಅವರ ಅತ್ಮಹತ್ಯೆ ಪ್ರಕರಣ ಹೋರಾಟದ ದಿಕ್ಕು ಬದಲಿಸಿದೆ. ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುತ್ತಿದ್ದಾರೆ.

ABOUT ME NEW FINAL FINAL

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 30, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment