ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 NOVEMBER 2023
THIRTHAHALLI : ಕಮ್ಮರಡಿ ಸಮೀಪದ ಕೆಸಲೂರು ಗ್ರಾಮದಲ್ಲಿ ಮೂರು ಚಿರತೆಗಳು ಕಾಣಿಸಿಕೊಂಡು ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ವಿಚಾರ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲಸೂರು ಸಮೀಪದ ಅಕೇಶಿಯ ನೆಡುತೋಪಿನಲ್ಲಿ ಚಿರತೆಗಳು ಕಾಣಿಸಿಕೊಂಡಿವೆ. ಹಾಗಾಗಿ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ನಡೆದು ಹೋಗಲು ಮತ್ತು ತೋಟ, ಗದ್ದೆಗೆ ಹೋಗಲು ಜನರು ಭಯ ಪಡುತ್ತಿದ್ದಾರೆ. ಇನ್ನು, ಜಾನುವಾರುಗಳನ್ನು ಮೇಯಲು ಕೊಟ್ಟಿಗೆಯಿಂದ ಹೊರ ಬಿಡಲಾಗದೆ ಚಿಂತೆಗೀಡಾಗಿದ್ದಾರೆ.
ಮೇಗರವಳ್ಳಿ ವಲಯ ಅರಣ್ಯಾಧಿಕಾರಿ ಮಧುಕರ್ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಗಳ ಚಲನವಲನದ ಮೇಲೆ ನಿಗಾ ವಹಿಸಿದ್ದಾರೆ.
ಇದನ್ನೂ ಓದಿ – ಸದ್ಯದಲೇ ಶಿವಮೊಗ್ಗದಿಂದ ಮತ್ತಷ್ಟು ಮಾರ್ಗಕ್ಕೆ ವಿಮಾನಯಾನ, ಇಲ್ಲಿದೆ ಸಂಸದರು ಹೇಳಿದ 5 ಪ್ರಮುಖಾಂಶ
LATEST NEWS
- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















