ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 08 ಏಪ್ರಿಲ್ 2019
ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ತೀರ್ಥಹಳ್ಳಿ ತಾಲೂಕು ಅಧ್ಯಕ್ಷ ಮದನ್, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಳೆದ ವಾರವಷ್ಟೇ ಮದನ್ ಜೆಡಿಎಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ತೀರ್ಥಹಳ್ಳಿ ಬಿಜೆಪಿ ಕಚೇರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಮದನ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಿಜೆಪಿ ತಾಲೂಕು ಅಧ್ಯಕ್ಷ ಮೋಹನ್ ಶೆಟ್ಟಿ, ಮದನ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.
ಚುನಾವಣೆ ಹೊಸ್ತಿಲಲ್ಲಿ ಮಹತ್ವದ ಬೆಳವಣಿಗೆ
ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರಾಗಿದ್ದ ಮದನ್, ದೀಢರ್ ಬೆಳವಣಿಗೆಯಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಸರ್ವಾಧಿಕಾರಿ ಧೋರಣೆಯಿಂದಾಗಿ ಪಕ್ಷ ತೊರೆಯುತ್ತಿರುವುದಾಗಿ ಮದನ್ ಸ್ಪಷ್ಟಪಡಿಸಿದ್ದರು.

ಚುನಾವಣೆ ಹೊಸ್ತಿಲಲ್ಲಿ ನಡೆದ ಬೆಳವಣಿಗೆಯಿಂದ ತಾಲೂಕಿನಲ್ಲಿ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂಬ ಅಭಿಪ್ರಾಯ ಮೂಡಿದೆ. ಆದರೆ ಮದನ್ ಕಾಂಗ್ರೆಸ್ ಸೇರಬಹುದು ಅಂತಾ ಹೇಳಲಾಗುತ್ತಿತ್ತು. ಇದರಿಂದ ಮೈತ್ರಿ ಅಭ್ಯರ್ಥಿಗೆ ಅನುಕೂಲವಾಗಲಿದೆ ಎಂದು ಲೆಕ್ಕಾಚಾರವಿತ್ತು. ಆದರೆ ಈಗ ಮದನ್, ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಿ ಅಚ್ಚರಿ ಮೂಡಿಸಿದ್ದಾರೆ.
ಮದನ್ ಸೇರ್ಪಡೆಗೆ ಬಿಜೆಪಿಯಲ್ಲೂ ಆಕ್ರೋಶ
ಇನ್ನು, ಮದನ್ ಈ ಮೊದಲು ಬಿಜೆಪಿಯಲ್ಲಿಯೇ ಇದ್ದರು. ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಆಪ್ತರು. 2010ರಲ್ಲಿ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಈಗ ಪುನಃ ಬಿಜೆಪಿಗೆ ಮರಳಿದ್ದಾರೆ. ಇದು ಬಿಜೆಪಿ ವಲಯದಲ್ಲಿ ಅಸಮಾಧನ ಮೂಡಿಸಿದೆ. ಕೆಲವು ಕಾರ್ಯಕರ್ತರು, ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.

ಮದನ್ ಸೇರ್ಪಡೆಯ ಬೆನ್ನಿಗೆ ಅವರ ಬೆಂಬಲಿಗರು ಸದ್ಯದಲ್ಲೇ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭ ಬಿಜೆಪಿಗೆ ಇದು ಲಾಭ ತಂದುಕೊಡುವ ಸಾಧ್ಯತೆ ಇದೆ. ಆ ಬಳಿಕ ನಡೆಯುವ ಬೆಳವಣಿಗೆಗಳು ತೀರ್ಥಹಳ್ಳಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






