SHIVAMOGGA LIVE NEWS | 20 JANUARY 2023
THIRTHAHALLI : ಮರಳು ಕ್ವಾರೆಯೊಂದರಲ್ಲಿ ಅಕ್ರಮವಾಗಿ ಮರಳು ಸಾಗಣೆ (sand mining) ಮಾಡಲಾಗುತ್ತಿದೆ. ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಲಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಕ್ರಮ ಮರಳು ವಿರುದ್ಧ ಹೋರಾಟ ಸಮಿತಿ ಆರೋಪಿಸಿದೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದೆ.
ಆಂದಿನಿ ಮರಳು ಕ್ವಾರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮರಳು ಸಾಗಣೆ ಮಾಡಲಾಗುತ್ತಿದೆ. ನಿಯಮಾನುಸಾರ ಸಿಸಿಟಿವಿ ದೃಶ್ಯಗಳು ಲಭ್ಯವಿಲ್ಲ. ರಾಜ್ಯದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ ಉಂಟು ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವರು, ಇಲಾಖೆಯ ಮುಖ್ಯ ಕಾರ್ಯದರ್ಶಿ, ಆಯುಕ್ತರು, ಜಂಟಿ ಆಯುಕ್ತರು, ಶಿವಮೊಗ್ಗ ಜಿಲ್ಲಾಧಿಕಾರಿ, ರಕ್ಷಣಾಧಿಕಾರಿ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಪ್ರಮುಖರಾದ ಸಂದೀಪ್ ಗಾರ್ಡರಗದ್ದೆ, ಸಂತೋಷ್ ಗಾರ್ಡರಗದ್ದೆ, ಸತೀಶ್ ಶೆಟ್ಟಿ, ಮಂಜುನಾಥ, ಕೃಷ್ಣಪ್ಪ ಕೆರೋಡಿ, ಗಣೇಶ್, ಸಂತೋಷ್, ಕಾರ್ತಿಕ್ ಗಾರ್ಡರಗದ್ದೆ, ರಾಜೇಶ್ ಇದ್ದರು.
ಇದನ್ನೂ ಓದಿ – ರಸ್ತೆಯಲ್ಲಿ ಬೈಕ್ ತಪಾಸಣೆ, ವೈದ್ಯಕೀಯ ಪರೀಕ್ಷೆ ಬಳಿಕ ಸವಾರ ಅರೆಸ್ಟ್, ಕವರ್ ನಲ್ಲಿದ್ದ ವಸ್ತು ಸಹಿತ ಬೈಕ್ ಸೀಜ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200