ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 JANUARY 2021
ಅಕಾಲಿಕ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದೆ. ಅಂತಹ ರೈತರಿಗೆ ಶೀಘ್ರದಲ್ಲಿ ಪರಿಹಾರ ನೀಡಲಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಅಕಾಲಿಕ ಮಳೆಯಿಂದ ಅಪಾರ ಹಾನಿ ಸಂಭಿಸಿದೆ. ಹಾನಿಗೊಳಗಾದ ರೈತರ ಜಮೀನಿನ ಕರಿತು ಮಾಹಿತಿ ಪಡೆದು, ಕೂಲಂಕಷ ತನಿಖೆ ನಡೆಸಿ ಪರಿಹಾರ ವಿತರಿಸಲಾಗುತ್ತದೆ ಎಂದು ತಿಳಿಸಿದರು.
ವಿಮೆ ಪಡೆಯಲು ಹಿಂದೇಟು
ಶಿವಮೊಗ್ಗ ಜಿಲ್ಲೆಯ ಹಲವು ರೈತರು ಬೆಳೆ ವಿಮೆ ಪಡೆಯುವಲ್ಲಿ ಹಿಂದೆ ಬಿದಿದ್ದಾರೆ. ಶಿಕಾರಿಪುರ, ಸೊರಬದ ರೈತರು ಬೆಳೆ ವಿಮೆ ಪಡೆಯುವಲ್ಲಿ ಮುಂದಿದ್ದಾರೆ. ಆದರೆ ತೀರ್ಥಹಳ್ಳಿ ಸಾಗರ, ಹೊಸನಗರ, ಭದ್ರಾವತಿಯ ರೈತರು ವಿಮೆ ಪಡೆಯುವಲ್ಲಿ ಹಿಂದಿದ್ದಾರೆ ಎಂದು ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಹಿರೇಕೆರೂರಿನಿಂದ ಕಾರ್ಕಳಕ್ಕೆ ತೆರಳುವ ಮಾರ್ಗ ಮಧ್ಯೆ ತೀರ್ಥಹಳ್ಳಿಗೆ ಭೇಟಿ ನೀಡಿದ್ದ ಸಚಿವ ಬಿ.ಸಿ.ಪಾಟೀಲ್, ತುಂಗಾ ನದಿಯ ಕಮಾನು ಸೇತುವೆಯನ್ನು ವೀಕ್ಷಿಸಿದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಕಿರಣ್, ಉಪ ನಿರ್ದೇಶಕ ಬಸವರಾಜು, ಕೃಷಿ ಇಲಾಖೆ ಅಧಿಕಾರಿಗಳು, ಬಿಜೆಪಿ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






