ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI | 17 ಅಕ್ಟೋಬರ್ 2019

ಆಗುಂಬೆ ಭಾಗದಲ್ಲಿ ಸುಮಾರು 10 ವರ್ಷದಿಂದ ಓಡಾಡುತ್ತಿರುವ ಕಾಡಾನೆಯನ್ನು ಕೂಡಲೆ ಸೆರೆ ಹಿಡಿಯುವಂತೆ ಶಾಸಕ ಆರಗ ಜ್ಞಾನೇಂದ್ರ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.
ಆನೆ ಕಾಡನ್ನು ಬಿಟ್ಟು ಆಗುಂಬೆ ಪಟ್ಟಣ ವ್ಯಾಪ್ತಿಯಲ್ಲಿಯು ಒಡಾಡುತ್ತಿದೆ. ಇದರಿಂದ ಜನರು ಆತಂಕಕ್ಕೀಡಾಗಿದ್ದಾರೆ. ಹಾಗಾಗಿ ಅದನ್ನು ಕೂಡಲೆ ಸೆರೆ ಹಿಡಿದು, ಬೇರೆಡೆ ಸ್ಥಳಾಂತರ ಮಾಡಬೇಕು ಎಂದರು.
ಭರವಸೆ ಸಾಕು, ಇನ್ನಾದರು ಹಿಡಿಯಿರಿ
ಪ್ರತಿ ಭಾರಿ ಆನೆ ಕಾಣಿಸಿಕೊಂಡಾಗಲು ಅರಣ್ಯ ಇಲಾಖೆ ಅದನ್ನು ಹಿಡಿಯುವುದಾಗಿ ಭರವಸೆ ನೀಡುತ್ತಿದ್ದಾರೆ. ಇನ್ನು ಅದೆ ಭರವಸೆ ನೀಡುತ್ತಿದ್ದರೆ ಆಗುವುದಿಲ್ಲ. ಕೂಡಲೆ ಆನೆ ಹಿಡಿದು ಬೇರೆಡೆಗೆ ಸ್ಥಳಾಂತರ ಮಾಡಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಸೂಚಿಸಿದರು. ಡಿಸಿಎಫ್ ಶಂಕರಪ್ಪ, ಎಸಿಎಫ್ ಶಿವಶಂಕರ್, ವಲಯ ಅರಣ್ಯಾಧಿಕಾರಿ ಉಮಾ, ಆಗುಂಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಸಿರುಮನೆ ನಂದನ್, ಮೇಗರವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ್ ಹೆಗ್ಡೆ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಇದ್ದರು.

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






