SHIVAMOGGA LIVE NEWS | 20 JUNE 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
THIRTHAHALLI : ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ ತಹಶೀಲ್ದಾರ್ ಕೊಠಡಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ (Protest) ನಡೆಸಿದರು. ಜಿಲ್ಲಾಧಿಕಾರಿಗೆ ಕರೆ ಮಾಡಿ ತಾಲೂಕು ಕಚೇರಿ ಆಡಳಿತ ಸುಧಾರಣೆ ಮಾಡ್ತೀರೋ ಇಲ್ಲವೋ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆರಗ ಆಕ್ರೋಶಕ್ಕೆ ಕಾರಣವೇನು?
‘ಇಂಗ್ಲಿಷ್ ಭಾಷೆಯಲ್ಲಿ ಜಾತಿ ಪ್ರಮಾಣ ಪತ್ರ ಪಡೆಯಲು ದಲಿತ ಮಹಿಳೆಯೊಬ್ಬರು 4 ತಿಂಗಳಿನಿಂದ ಕಚೇರಿಗೆ ಬರುತ್ತಿದ್ದಾರೆ. ಇನ್ನೂ ಪ್ರಮಾಣ ಪತ್ರ ಸಿಕ್ಕಿಲ್ಲ. ಕಚೇರಿ ಸಿಬ್ಬಂದಿ ಮಹಿಳೆಗೆ ನೀನು ದಿನಾ ಬಂದು ಕಿರಿಕಿರಿ ಮಾಡ್ತೀಯ. ಸುಮ್ಮನೆ ವಾಪಸ್ ಹೋಗು ಎಂದು ಗದರಿಸುತ್ತಾರೆ. ಮಧ್ಯವರ್ತಿಗಳ ಕೆಲಸ ಸಲೀಸಾಗಿ ಆಗುತ್ತಿದೆ. ಜನರ ಕೆಲಸ ಆಗುತ್ತಿಲ್ಲ. ಸರ್ಕಾರ ಸಂಬಳ ಕೊಡಲ್ವಾ? ನಿಮ್ಮ ಕೆಟ್ಟ ಕೆಲಸದಿಂದ ಜನರ ಬಳಿ ನಾನು ಮಾತು ಕೇಳುವಂತಾಗಿದೆ’ ಎಂದು ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದರು.
ಇಲ್ಲಿಂದ ಎದ್ದು ಹೋಗುವುದಿಲ್ಲ
ತಾಲೂಕ ಕಚೇರಿಯ ಕೆಲವು ಸಿಬ್ಬಂದಿಯಿಂದ ಸಾರ್ವಜನಿಕರಿಗೆ ತೀವ್ರ ಕಿರಿಕಿರಿ ಆಗುತ್ತಿದೆ. ಕ್ರಮ ಕೈಗೊಳ್ಳದಿದ್ದರೆ ಇಲ್ಲಿಂದ ಎದ್ದು ಹೋಗಲ್ಲ ಎಂದು ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಚೇರು ಹಾಕಿ ಕುಳಿತು ಪ್ರತಿಭಟನೆ ನಡೆಸಿದರು. ಇದೇ ವೇಳೆ ಜಿಲ್ಲಾಧಿಕಾರಿಗೆ ಕರೆ ಮಾಡಿ ತಾಲೂಕು ಕಚೇರಿ ಸಿಬ್ಬಂದಿಯ ವರ್ತನೆ ಸರಿಪಡಿಸುವಂತೆ ಆಗ್ರಹಿಸಿದರು.
ಸಮಾಧಾನಪಡಿಸಿದ ಜಿಲ್ಲಾಧಿಕಾರಿ
ಫೋನ್ ಮೂಲಕ ಶಾಸಕ ಆರಗ ಜ್ಞಾನೇಂದ್ರ ಅವರನ್ನು ಸಮಾಧಾನಪಡಿಸಿದ ಜಿಲ್ಲಾಧಿಕಾರಿ, ಸಂಜೆಯೊಳಗೆ ಇಂಗ್ಲೀಷ್ ಭಾಷೆಯಲ್ಲಿ ಜಾತಿ ಪ್ರಮಾಣಪತ್ರ ನೀಡಲಾಗುತ್ತದೆ. ಕಚೇರಿ ಸಿಬ್ಬಂದಿ ವರ್ತನೆ ಕುರಿತು ಸಮಗ್ರ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ಕಚೇರಿ ಬಾಗಿಲಲ್ಲಿ ನೀವು ಕುಳಿತರೆ ಕಂದಾಯ ಇಲಾಖೆ ಆಡಳಿತಕ್ಕೆ ಮುಜುಗರ ಆಗಲಿದೆ ಎಂದರು. ಇದರಿಂದ ಸಮಾಧಾನಗೊಂಡ ಶಾಸಕ ಆರಗ ಜ್ಞಾನೇಂದ್ರ ಪ್ರತಿಭಟನೆ ಕೈ ಬಿಟ್ಟರು.

ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ
ಬಳಿಕ ಸಬ್ ರಿಜಿಸ್ಟ್ರಾರ್ ಕಚೇರಿ, ಕಸಬಾ ನಾಡಕಚೇರಿಗೂ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾರ್ವಜನಿಕರ ಕೆಲಸಗಳು ಶೀಘ್ರ ಮುಗಿಯಬೇಕು. ಕಿರಿಕಿರಿ ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪಟ್ಟಣ ಪಂಚಾಯಿತಿ ಸದಸ್ಯ ಸೊಪ್ಪುಗುಡ್ಡ ರಾಘವೇಂದ್ರ, ತಳಲೆ ಪ್ರಸಾದ್ ಇದ್ದರು.
ಇದನ್ನೂ ಓದಿ – ತೆಪ್ಪ ಮುಳುಗಿ ಭದ್ರಾ ಹಿನ್ನೀರಿನಲ್ಲಿ ಶಿವಮೊಗ್ಗದ ಮೂವರು ಯುವಕರು ನಾಪತ್ತೆ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






