SHIVAMOGGA LIVE | 31 JULY 2023
THIRTHAHALLI : ಮಾಜಿ ಸಚಿವ ಆರಗ ಜ್ಞಾನೇಂದ್ರ ಇವತ್ತು ತೀರ್ಥಹಳ್ಳಿ ತಾಲೂಕು ಕಚೇರಿಗೆ ದಿಢೀರ್ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ಈ ವೇಳೆ ಅಧಿಕಾರಿಗಳ ಕುರ್ಚಿಗಳು ಖಾಲಿ ಇದ್ದಿದ್ದನ್ನು ಕಂಡು ಆಕ್ರೋಶಗೊಂಡರು.
ಸಂಜೆ 4.30ರ ಹೊತ್ತಿಗೆ ತಾಲೂಕು ಕಚೇರಿಗೆ ಶಾಸಕ ಆರಗ ಜ್ಞಾನೇಂದ್ರ ಹಠಾತ್ ಭೇಟಿ ನೀಡಿದ್ದರು. ಈ ವೇಳೆ ವಿವಿಧ ಸೆಕ್ಷನ್ಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ ಇಲ್ಲದಿರುವುದನ್ನು ಕಂಡು ಸಿಟ್ಟಾದರು. ಕೂಡಲೆ ರಿಜಿಸ್ಟರ್ ತರಿಸಿಕೊಂಡು ಪರಿಶೀಲನೆ ನಡೆಸಿದರು.
ಇದನ್ನೂ ಓದಿ – ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗದಲ್ಲಿ ನಂದಿನಿ ಹಾಲು ರೇಟ್ ಹೆಚ್ಚಳ, ಹಿಂದೆ ಎಷ್ಟಿತ್ತು? ಈಗ ಎಷ್ಟಾಗುತ್ತೆ?
ಶೇ.50ರಷ್ಟು ಸಿಬ್ಬಂದಿ ಇಲ್ಲ
ಇನ್ನು, ಪರಿಶೀಲನೆ ವೇಳೆ ತೀರ್ಥಹಳ್ಳಿ ತಾಲೂಕು ಕಚೇರಿಯಲ್ಲಿ ಶೇ.50ಕ್ಕಿಂತಲು ಕಡಿಮೆ ಸಿಬ್ಬಂದಿ ಇದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು. ಹೀಗೆ ಮುಂದುವರೆದೆರೆ ತಾಲೂಕಿನ ಕೆಲಸಗಳು ನಡೆಯುವುದು ಹೇಗೆ ಎಂದು ಪ್ರಶ್ನಿಸಿದರು. ಈ ಸಂಬಂಧ ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿ ಸಿಬ್ಬಂದಿ ಕೊರತೆ ಕುರಿತು ತಿಳಿಸಿದರು. ಅಲ್ಲದೆ ನಿಯೋಜನೆ ಮೇಲೆ ತೆರಳಿರುವ ಇಬ್ಬರು ಸಿಬ್ಬಂದಿಯನ್ನು ಕೂಡಲೆ ತೀರ್ಥಹಳ್ಳಿಗೆ ಕಳುಹಿಸುವಂತೆ ಸೂಚನೆ ನೀಡಿದರು.
View this post on Instagram
ತಾಲೂಕು ಕಚೇರಿಯ ವಿವಿಧ ಸೆಕ್ಷನ್ಗಳಿಗೆ ತೆರಳಿದ ಮಾಜಿ ಸಚಿವರು ಸಿಬ್ಬಂದಿ ಕೊರತೆ ಮತ್ತು ವ್ಯವಸ್ಥೆ ಕುರಿತು ಮಾಹಿತಿ ಪಡೆದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200