ತಾಲೂಕು ಕಚೇರಿಗೆ MLA ದಿಢೀರ್‌ ಭೇಟಿ, ಹಾಜರಾತಿ ಪುಸ್ತಕ ತೆಗೆದು ನೋಡಿ ಅಧಿಕಾರಿಗಳ ವಿರುದ್ಧ ಸಿಡಿಮಿಡಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 19 OCTOBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

THIRTHAHALLI : ಸಾರ್ವಜನಿಕರ ದೂರಿನ ಹಿನ್ನೆಲೆ ಶಾಸಕ ಆರಗ ಜ್ಞಾನೇಂದ್ರ (Araga Jnanendra) ಅವರು ತೀರ್ಥಹಳ್ಳಿ ತಾಲೂಕು ಕಚೇರಿ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಕಚೇರಿ ಅವ್ಯವಸ್ಥೆ ಕಂಡು ಗರಂ ಆದರು.

ಬುಧವಾರ ಮಧ್ಯಾಹ್ನ ಶಾಸಕ ಆರಗ ಜ್ಞಾನೇಂದ್ರ ಅವರು ತಾಲೂಕು ಕಚೇರಿಗೆ ದಿಢೀರ್‌ ಭೇಟಿ ನೀಡಿದರು. ಈ ಸಂದರ್ಭ ಕಚೇರಿಯ ವಿವಿಧೆಡೆ ಸಿಬ್ಬಂದಿ ಇಲ್ಲದಿರುವುದನ್ನು ಗಮನಿಸಿ ಸಿಡಿಮಿಡಿಗೊಂಡರು. ಹಾಜರಾತಿ ಪುಸ್ತಕ ತರಿಸಿಕೊಂಡು ಪರಿಶೀಲಿಸಿದರು.

ಇದನ್ನೂ ಓದಿ- ರಾಗಿಗುಡ್ಡಕ್ಕೆ ತೆರಳಬೇಕಿದ್ದ ಪ್ರಮೋದ್‌ ಮುತಾಲಿಕ್‌ಗೆ ಮಾಸ್ತಿಕಟೆಯಲ್ಲಿ ತಡೆ, ನೊಟೀಸ್‌ ಜಾರಿ

ರಜೆ ಚೀಟಿ ಇದ್ದರೂ ನಮೂದಾಗಿಲ್ಲ

ಸರ್ವೆ ಇಲಾಖೆಗೆ ಭೇಟಿ ನೀಡಿದ್ದ ವೇಳೆ ಕಚೇರಿಯಲ್ಲಿ ಸಿಬ್ಬಂದಿ ಇರಲಿಲ್ಲ. ಹಾಗಾಗಿ ಹಾಜರಾತಿ ಪುಸ್ತಕ ತರಿಸಿಕೊಂಡು ಪರಿಶೀಲಿಸಿದರು. ಸಿಬ್ಬಂದಿಯೊಬ್ಬರು ಕೊಟ್ಟಿದ್ದ ರಜೆ ಚೀಟಿ ಪುಸ್ತಕದಲ್ಲಿತ್ತು. ಆದರೆ ಅದನ್ನು ಹಾಜರಾತಿ ಪುಸ್ತಕದಲ್ಲಿ ನಮೂದು ಮಾಡಿರಲಿಲ್ಲ. ಇನ್ನು ಸಮರ್ಪಕವಾಗಿ ಸಹಿ ಮಾಡಿರಲಿಲ್ಲ. ಇದರಿಂದ ಸಿಟ್ಟಾದ ಶಾಸಕರು, ಇಂತಹ ತಪ್ಪುಗಳನ್ನು ಮಾಡದಂತೆ ತರಾಟೆಗೆ ತೆಗೆದುಕೊಂಡರು.

ತಾಲೂಕು ಕಚೇರಿಯಲ್ಲಿ ಅಧಿಕಾರಿಗಳು ನಿಯಮಿತವಾಗಿ ಕಡತ ವಿಲೇವಾರಿ ಮಾಡದಿರುವ ಕುರಿತು ಸಾರ್ವಜನಿಕರಿಂದ ದೂರು ಕೇಳಿ ಬರುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ಕಚೇರಿಯಲ್ಲಿನ ಅವ್ಯವಸ್ಥೆಯನ್ನು ತಕ್ಷಣ ಪರಿಹರಿಸಬೇಕು ಎಂದು ತಾಕೀತು ಮಾಡಿದರು.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment