ತೀರ್ಥಹಳ್ಳಿ: ಕುಟುಂಬದೊಂದಿಗೆ ನವದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನವವಧು (Newlywed) ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ.
ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ.
ಎದುರಿನಿಂದ ಬಂದ ಕಾರು ಡಿಕ್ಕಿ
ನಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು (Newlywed), ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಸುಬ್ರಹ್ಮಣ್ಯ ಅವರು ಕಾರು ಚಲಾಯಿಸುತ್ತಿದ್ದರು. ಮೇಘರವಳ್ಳಿ ಸಮೀಪ ಅರೇಕಲ್ ಕ್ರಾಸ್ ಸಮೀಪ ಎದುರಿನಿಂದ ಬಂದ ರಿಟ್ಜ್ ಕಾರು, ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.
ಘಟನೆ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200