ದೇವಸ್ಥಾನದಲ್ಲಿ ಕಳ್ಳತನವಾಗಿ ಎರಡೇ ಗಂಟೆಯಲ್ಲಿ ಆರೋಪಿ ಅರೆಸ್ಟ್‌, ಎಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ: ದೇವಸ್ಥಾನದಲ್ಲಿ ಕಳ್ಳತನ (Theft) ಮಾಡಿದ ಕೇವಲ 2 ಗಂಟೆಯೊಳಗೆ ಆಗುಂಬೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಂಕದಹೊಳೆ ಸಮೀಪದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆಗುಂಬೆ ಶ್ರೀರಾಮಮಂದಿರದಲ್ಲಿ ಸೋಮವಾರ ರಾತ್ರಿ ರಾಮ ದೇವರ ಕೈಯಲ್ಲಿದ್ದ ಬಿಲ್ಲು, ಕಾಣಿಕೆ ಹುಂಡಿಯಲ್ಲಿದ್ದ ಹಣ ಕಳವು ಮಾಡಲಾಗಿತ್ತು.

ವಿಷಯ ತಿಳಿಯುತ್ತಲೆ ತನಿಖೆ ಆರಂಭಿಸಿದ ಪೊಲೀಸರು ಸುಂಕದ ಹೊಳೆ ಸಮೀಪದ ಏಳಮಲೈ ವಾಸಿ ಮನೋಜ್ ಆಲಿಯಾಸ್ ಗುಂಡ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಆತನದಿಂದ ರಾಮಮಂದಿರದಲ್ಲಿ ಕಳವು ಆಗಿದ್ದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಆಗುಂಬೆ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಶಿವನಗೌಡ ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ದಸ್ತಗಿರಿ ಮಾಡಿದೆ. ಕಾಯಾಚರಣೆಯಲ್ಲಿ ಸಿಬ್ಬಂದಿ ಅನಿಲ್, ಸುರೇಶ್, ರಮೇಶ್, ನಾಗಾರ್ಜುನ, ಅವಿನಾಶ್, ಚೇತನ, ಆದರ್ಶ ಪಾಲ್ಗೊಂಡಿದ್ದರು.

Agumbe-Board-General

ಇದನ್ನೂ ಓದಿ » ‘ಪಾಕಿಸ್ತಾನ ಜಿಂದಾಬಾದ್‌’ ಘೋಷಣೆ ಕೇಸ್‌, ಭದ್ರಾವತಿಯಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Theft case arrest

Leave a Comment