ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 03 FEBRUARY 2021
ತೋಟದೊಳಗೆ ನುಗ್ಗಿದ್ದ ದನಕ್ಕೆ ಹೊಡೆದಿದ್ದ ವ್ಯಕ್ತಿ ಮೇಲೆದನದ ಮಾಲೀಕ ಹಲ್ಲೆ ನಡೆಸಿದ್ದಾನೆ. ಅಲ್ಲದೆ ದನಕ್ಕೆ ಹೊಡೆದಿದ್ದಕ್ಕೆ ಪಂಚಾಯಿತಿ ವತಿಯಿಂದ ಮೂರು ಸಾವಿರ ರೂ. ದಂಡ ವಿಧಿಸಲಾಗಿದೆ.
ತೋಟಕ್ಕೆ ನುಗ್ಗಿದ್ದ ದನ ಓಡಿಸಿದ್ದರು
ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿ ಬಿದರಗೋಡು ಗ್ರಾಮದ ಸತೀಶ್ ಎಂಬುವವರು ಹಲ್ಲೆಗೊಳಗಾದವರು. ಶಂಕರಗೌಡ ಎಂಬುವವರ ತೋಟದಲ್ಲಿ ಸತೀಶ್ ಕೆಲಸ ಮಾಡುತ್ತಿದ್ದರು. ಮೂರು ದಿನದ ಹಿಂದೆ ಶಂಕರಗೌಡ ಅವರ ತೋಟಕ್ಕೆ ನುಗ್ಗಿದ್ದ ದನವನ್ನು ಸತೀಶ್ ಹೊಡೆದು ಓಡಿಸಿದ್ದರು.
ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಹೊಡೆದಿದ್ದಕ್ಕೆ ಮೂರು ಸಾವಿರ ದಂಡ
ದನವನ್ನು ಹೊಡೆದು ಓಡಿಸಿದ್ದಕ್ಕೆ ಅದರ ಮಾಲೀಕ ನವೀನ್ ಎಂಬುವವರು ಪಂಚಾಯಿತಿ ಕರೆಸಿದ್ದರು. ವಿಚಾರಣೆ ಮಾಡಿ, ಸತೀಶ್ಗೆ ಮೂರು ಸಾವಿರ ರೂ. ದಂಡ ವಿಧಿಸಲಾಗಿತ್ತು. ನಾಲ್ಕು ದಿನದ ಗಡುವು ನೀಡಲಾಗಿತ್ತು. ಆದರೆ ಪಂಚಾಯಿತಿಯಾದ ಮರುದಿನವೆ ಸತೀಶ್ ಮನೆಗೆ ಬಂದ ನವೀನ್ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಹಲ್ಲೆಗೊಂಡಿರುವ ಸತೀಶ್ ನನ್ನು ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ಸಂಬಂಧ ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200