SHIVAMOGGA LIVE NEWS | 7 JUNE 2024
RAINFALL NEWS : ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಆವರಿಸಿಕೊಳ್ಳುತ್ತಿದೆ. ಇದರ ನಡುವೆ ಸಿಡಿಲು (LIGHTENING) ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಅಂಗಡಿಯೊಂದು ಬೆಂಕಿಗೆ ಆಹುತಿಯಾಗಿದೆ.
ಸಿಡಿಲಿಗೆ ವ್ಯಕ್ತಿ ಬಲಿ
ಆಗುಂಬೆ ಸಮೀಪದ ಬಿದರಗೋಡು ಗ್ರಾಮದ ಗುಜುಗೊಳ್ಳಿ ಎಂಬಲ್ಲಿ ಗುರುವಾರ ಅಡಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ಸಿಡಿಲು ಬಡಿದು ಅಸುನೀಗಿದ್ದಾರೆ. ನಾಗೇಂದ್ರ (45) ಮೃತ ಕಾರ್ಮಿಕ. ಆಗುಂಬೆ ಭಾಗದಲ್ಲಿ ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುತ್ತಿತ್ತು. ಗುಜಗೊಳ್ಳಿ ಗ್ರಾಮದ ಅಡಕೆ ತೋಟದಲ್ಲಿ ಕೆಲಸ ಮಾಡುವಾಗ ಮರಕ್ಕೆ ಬಡಿದ ಸಿಡಿಲು ಮರದ ಪಕ್ಕದಲ್ಲೇ ಇದ್ದ ನಾಗೇಂದ್ರಗೆ ತಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆ ಬೆನ್ನಿಗೆ ತೋಟದ ಮಾಲೀಕ ಕೇಶವ ಕಿಣಿ ಅವರ ಮೊಮ್ಮಗ ರಕ್ಷಿತ್ ಕಿಣಿ ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ ಎರಡು ಲಕ್ಷ ರೂ. ಮೊತ್ತದ ಪರಿಹಾರದ ಚೆಕ್ ನೀಡಿದ್ದಾರೆ.
ಸಿಡಿಲಿಗೆ ಅಂಗಡಿ ಆಹುತಿ
HOLEHONNURU : ಜಾವಳ್ಳಿ ಬಸ್ ಸ್ಟಾಪ್ ಸಮೀಪ ಬುಧವಾರ ಸಂಜೆ ಸಿಡಿಲು ಬಡಿದು ಜಾವಳ್ಳಿಯ ವೇದಾವತಿ ಎಂಬುವವರ ಪ್ರಾವಿಜನ್ ಸ್ಟೋರ್ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. ಅಂಗಡಿ ವಸ್ತುಗಳು ಸಂಪೂರ್ಣ ಆಹುತಿಯಾಗಿವೆ. ಸಿಡಿಲು ಬಡಿದಾಗ ಮಾಲೀಕರು ಮನೆ ಹಿಂಭಾಗದಲ್ಲಿ ಇದ್ದು, ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ – ಹೊಟೇಲ್ನಲ್ಲಿ ಬ್ಯಾಗ್ ಮರೆತ ಗ್ರಾಹಕ, ಒಳಗಿತ್ತು ಲಕ್ಷ ಲಕ್ಷ ಹಣ, ವಾಪಸ್ ಬಂದು CCTV ನೋಡಿದ್ಮೇಲೆ ಕಾದಿತ್ತು ಆಘಾತ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200