ಕಸ್ತೂರಿ ರಂಗನ್ ವರದಿ ವಿರೋಧಿಸಿ ತೀರ್ಥಹಳ್ಳಿಯಲ್ಲಿ ಪಾದಯಾತ್ರೆ, ಎಲ್ಲಿಂದ ಎಲ್ಲಿವರೆಗೆ ನಡೆಯುತ್ತೆ ಪಾದಯಾತ್ರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 21 ಅಕ್ಟೋಬರ್ 2020

ಪಶ್ಚಿಮಘಟ್ಟದ ಗ್ರಾಮಗಳಲ್ಲಿನ ಜನರಿಗೆ ಕಂಟಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನವೆಂಬರ್ 7 ರಿಂದ 9ರವರೆಗೆ ತೀರ್ಥಹಳ್ಳಿ ತಾಲೂಕಿನಲ್ಲಿ ಪಾದಯಾತ್ರೆ ನಡೆಸಲಾಗುತ್ತದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥಗೌಡ, ಬಿದರಗೋಡಿನಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ನಡೆಯಲಿದೆ. ಮೊದಲ ದಿನ ಬಿದರಗೋಡಿನಿಂದ ಗುಡ್ಡೇಕೇರಿವರೆಗೆ ಪಾದಯಾತ್ರೆ ನಡೆಯಲಿದೆ. 2ನೇ ದಿನ ಗುಡ್ಡೇಕೇರಿಯಿಂದ ರಂಜದಕಟ್ಟೆವರೆಗೆ, 3ನೇ ದಿನ ರಂಜದಕಟ್ಟೆಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದರು.

122428090 983860098760567 2816976454692017560 n.jpg? nc cat=108& nc sid=8024bb& nc ohc=SiPKieh1mQMAX H6SoY& nc ht=scontent.fblr1 4

ಕೇರಳ ಮಾದರಿ ವರದಿ ಜಾರಿಗೊಳಿಸಿ

ಕಸ್ತೂರಿ ರಂಗನ್ ವರದಿಯಲ್ಲಿ ವಾಸ್ತವಾಂಶವನ್ನು ಮುಚ್ಚಿಡಲಾಗಿದೆ. ಪಶ್ಚಿಮಘಟ್ಟದ ಹಳ್ಳಿಗಳ ಜನರ ಭಾವನೆಗಳಿಗೆ ಬೆಲೆ ಕೊಡದೆ ಸಮಸ್ಯೆ ಉಂಟು ಮಾಡುತ್ತಿದ್ದಾರೆ. ಕೇರಳ ಮಾದರಿಯಲ್ಲಿ ವರದಿ ಜಾರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಯಾಕೆ ಸಾಧ್ಯವಾಗುತ್ತಿಲ್ಲ ಎಂದು ಮಂಜುನಾಥಗೌಡ ಪ್ರಶ್ನಿಸಿದರು.

ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಜೀನಾ ವಿಕ್ಟರ್, ತಾಲೂಕು ಅಧ್ಯಕ್ಷ ಡಾ.ಟಿ.ಎಲ್.ಸುಂದರೇಶ್, ಕಟ್ಟೆಹಕ್ಕಲು ಕಿರಣ್, ಹೊರಬೈಲು ರಾಮಕೃಷ್ಣ, ರಾಘವೇಂದ್ರ ಶೆಟ್ಟಿ, ಕಲ್ಗದ್ದೆ ರತ್ನಾಕರ್, ಕುರುವಳ್ಳಿ ನಾಗರಾಜ್, ಅಶ್ವಲ್ ಗೌಡ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

122336553 983106055502638 6844548172344119085 n.jpg? nc cat=107& nc sid=110474& nc ohc=JrLgAWzRixQAX9XQ8JM& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment