BREAKING | ಆಗುಂಬೆ ಘಾಟಿಯಲ್ಲಿ ಕಂದಕಕ್ಕೆ ಬಿದ್ದ ವ್ಯಕ್ತಿ, ಪ್ರಾಣದ ಹಂಗು ತೊರೆದು ರಕ್ಷಿಸಿದ ಯುವಕರು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE | 16 JULY 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

THIRTHAHALLI : ಆಗುಂಬೆ ಘಾಟಿಯಲ್ಲಿ (Agumbe Ghat) ಸುಮಾರು 20 ಅಡಿ ಕಂದಕಕ್ಕೆ ಬಿದ್ದ ವ್ಯಕ್ತಿಯೊಬ್ಬರನ್ನು ಆಗುಂಬೆಯ ಯುವಕರು ರಕ್ಷಣೆ ಮಾಡಿದ್ದಾರೆ. ಗಂಭೀರ ಗಾಯಗೊಂಡಿರುವ ಆತನನ್ನು ಚಿಕಿತ್ಸೆಗೆಂದು ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಹೇಗಾಯ್ತು ಘಟನೆ?

ಶಿವಮೊಗ್ಗದ ಮೊಹಮ್ಮದ್‌ ಬಾಷಾ ಎಂಬುವವರು ಟೋಯಿಂಗ್‌ ವಾಹನದಲ್ಲಿ ಟ್ರ್ಯಾಕ್ಟರನ್ನು ಟೋಯಿಂಗ್‌ ಮಾಡಿಕೊಂಡು ಬರುತ್ತಿದ್ದರು. 7ನೇ ತಿರುವಿನಲ್ಲಿ ಟೋಯಿಂಗ್‌ ವಾಹನ ಘಾಟಿ ಹತ್ತಲಾಗದೆ ನಿಂತಿದೆ. ವಾಹನದಿಂದ ಕೆಳಗಿಳಿದ ಮೊಹಮ್ಮದ್‌ ಬಾಷಾ, ಚಾಲಕನಿಗೆ ನಿರ್ದೇಶನ ನೀಡುತ್ತಿದ್ದರು. ಈ ವೇಳೆ ವಾಹನ ದಿಢೀರ್‌ ಹಿಂದಕ್ಕೆ ಬಂದಿದ್ದು ಮೊಹಮ್ಮದ್‌ ಬಾಷಾ ತಪ್ಪಿಸಿಕೊಳ್ಳುವ ಭರದಲ್ಲಿ ಘಾಟಿಯಿಂದ (Agumbe Ghat) ಕೆಳಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ.

Person-Rescued-at-agumbe-ghat.

ರಕ್ಷಣೆಗೆ ಧಾವಿಸಿದ ಆಗುಂಬೆ ಯುವಕರು

ಅದೇ ಮಾರ್ಗವಾಗಿ ಆಗುಂಬೆಗೆ ತೆರಳುತ್ತಿದ್ದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಮೊಹಮ್ಮದ್‌ ಬಾಷಾ ಅವರ ರಕ್ಷಣೆಗೆ ಧಾವಸಿದ್ದಾರೆ. ಪ್ರವಾಸಿಗರ ವಾಹನಗಳಲ್ಲಿದ್ದ ಬೆಡ್‍ಶೀಟ್‌, ಹಗ್ಗವಾಗಿ ಬಳಸಿ ಕಂದಕ್ಕೆ ಇಳಿದು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮೊಹಮ್ಮದ್‌ ಬಾಷಾ ಅವರನ್ನು ರಕ್ಷಿಸಿ ಮೇಲತ್ತಿದ್ದಾರೆ. ಅವರಿಗೆ ಸೊಂಟ ಮತ್ತು ತಲೆಗೆ ತೀವ್ರ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.

ಇಲ್ಲಿದೆ ರಕ್ಷಣಾ ಕಾರ್ಯಾಚರಣೆಯ ವಿಡಿಯೋ

ಆಪದ್ಭಾಂದವರಾದ ಸ್ಥಳೀಯ ಯುವಕರು

ನಾವು ಅದೇ ಮಾರ್ಗದಲ್ಲಿ ಬರುತ್ತಿದ್ದಾಗ ಜನ ಸೇರಿದ್ದರು. ಎಲ್ಲರು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡುತ್ತಿದ್ದರು. ಕೂಡಲೆ ನಾವು ಕಾರ್ಯಪ್ರವೃತ್ತರಾಗಿ ರಕ್ಷಣೆಗೆ ಧಾವಿಸಿದೆವು. ಎಲ್ಲರು ಒಗ್ಗೂಡಿ ಅವರನ್ನು ರಕ್ಷಿಸಿದ್ದೇವೆ. ಆಂಬುಲೆನ್ಸ್‌ ಮೂಲಕ ಅವರನ್ನು ಆಸ್ಪತ್ರೆ ಕಳುಹಿಸಲಾಗಿದೆ.ನಿತ್ಯಾನಂದ ಆಗುಂಬೆ, ಸ್ಥಳೀಯರು

ನಿತ್ಯಾನಂದ ಆಗುಂಬೆ ಅವರ ನೇತೃತ್ವದಲ್ಲಿ ಸ್ಥಳೀಯರಾದ ಸಚಿನ್‌, ಅಶ್ವಥ್‌, ಕಿರಣ್‌, ಅಭಿ, ಶ್ರೀಕಾಂತ್‌, ಅಣ್ಣು ಪೂಜಾರಿ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಆಗುಂಬೆ ಯುವಕರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ – ಹೈವೇಯಲ್ಲಿ ಅಪಘಾತ, ಕಾರಿನ ಹಿಂಬದಿ ಸೀಟ್‌ನಲ್ಲಿದ್ದ ಡ್ರಮ್‌ ಕಂಡು ಜನಕ್ಕೆ ಶಾಕ್‌ – ಮತ್ತಷ್ಟು ಸುದ್ದಿ ಇಲ್ಲಿದೆ

ಅತ್ಯಂತ ಡೇಂಜರಸ್‌ ತಿರುವು

ಆಗುಂಬೆ ಘಾಟಿಯ 7ನೇ ತಿರುವು ಅತ್ಯಂತ ಅಪಾಯಕಾರಿ ತಿರುವು. ಶಿವಮೊಗ್ಗ ಜಿಲ್ಲೆ ವ್ಯಾಪ್ತಿಗೆ ಸೇರುವ ಈ ತಿರುವಿನಲ್ಲಿ ಅಪಘಾತಗಳು ಸಾಮಾನ್ಯ. ಇಲ್ಲಿ ಕಂದಕಕ್ಕೆ ಬಿದ್ದು ಹಲವರು ಸಾವನ್ನಪ್ಪಿದ್ದಾರೆ. ಆಗುಂಬೆ ಭಾಗದಲ್ಲಿ ಮಳೆಯಾಗುತ್ತಿದ್ದು ಚಾಲಕರು, ಪ್ರವಾಸಿಗರು ಸ್ವಲ್ಪ ಯಾಮಾರಿದರು ಅಪಘಾತ ನಿಶ್ಚಿತ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment