ಶಿವಮೊಗ್ಗ ಲೈವ್
ತೀರ್ಥಹಳ್ಳಿ: ತಾಲ್ಲೂಕಿನ ಹರಳಿಮಠ ಬಳಿ ಕಾಡುಕೋಣ ಬೇಟೆಯಾಡಿ ಮಾಂಸವನ್ನು ಕಿಡಿಗೇಡಿಗಳು ಹೊತ್ತೊಯ್ತಿದ್ದಾರೆ. ಅದರ ಮೂಳೆಗಳನ್ನು ಸ್ಥಳದಲ್ಲಿಯೇ ಬಿಟ್ಟಿದ್ದು ಪ್ರಕರಣ ಬೆಳಕಿಗೆ ಬಂದಿದೆ.

ತೀರ್ಥಹಳ್ಳಿ – ಬಸವಾನಿ ಮಾರ್ಗ ಮಧ್ಯೆ ಇರುವ ಹರಳಿಮಠ ಗ್ರಾಮದಲ್ಲಿ ಕೃತ್ಯ ನಡೆದಿದೆ. ದುಷ್ಕರ್ಮಿಗಳು ಬಂದೂಕು ಬಳಸಿ ಕಾಡುಕೋಣದ ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸುದ್ದಿಯನ್ನೂ ಓದಿ
ಜೆರಾಕ್ಸ್ ಮಾಡಿಸಲು ತೆರಳಿದ್ದ ವ್ಯಕ್ತಿ ಹತ್ಯೆ ಕೇಸ್, ಸ್ಥಳಕ್ಕೆ ಎಸ್ಪಿ ಭೇಟಿ, ಏನಿದು ಪ್ರಕರಣ?