ರಸ್ತೆ ಬದಿ ಕಾಡುಕೋಣದ ಅವಶೇಷ ಪತ್ತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ: ತಾಲ್ಲೂಕಿನ ಹರಳಿಮಠ ಬಳಿ ಕಾಡುಕೋಣ ಬೇಟೆಯಾಡಿ ಮಾಂಸವನ್ನು ಕಿಡಿಗೇಡಿಗಳು ಹೊತ್ತೊಯ್ತಿದ್ದಾರೆ. ಅದರ ಮೂಳೆಗಳನ್ನು ಸ್ಥಳದಲ್ಲಿಯೇ ಬಿಟ್ಟಿದ್ದು ಪ್ರಕರಣ ಬೆಳಕಿಗೆ ಬಂದಿದೆ.

Bison-Hunt-in-Harlimata-in-Thirthahalli-Taluk

ತೀರ್ಥಹಳ್ಳಿ – ಬಸವಾನಿ ಮಾರ್ಗ ಮಧ್ಯೆ ಇರುವ ಹರಳಿಮಠ ಗ್ರಾಮದಲ್ಲಿ ಕೃತ್ಯ ನಡೆದಿದೆ. ದುಷ್ಕರ್ಮಿಗಳು ಬಂದೂಕು ಬಳಸಿ ಕಾಡುಕೋಣದ ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮಾಹಿತಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.