ಹಣಗೆರೆ ಕಟ್ಟೆಯಲ್ಲಿ ಪೊಲೀಸ್‌ ಇಲಾಖೆ ಮಹತ್ವದ ಸಭೆ, 7 ಪ್ರಮುಖ ನಿರ್ಧಾರ ಪ್ರಕಟ, ಏನೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 14 JUNE 2023

THIRTHAHALLI : ಹಣಗೆರೆ ಕಟ್ಟೆ (Hanagere) ಗ್ರಾಮದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಜನ ಸಂಪರ್ಕ ಸಭೆ ಆಯೋಜಿಸಲಾಗಿತ್ತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ವಿಚಾರಗಳ ಚರ್ಚೆಯಾಯಿತು. ಈ ವೇಳೆ ಹಲವು ಪ್ರಮುಖ ನಿರ್ಧಾರಗಳನ್ನು ಜಿಲ್ಲಾ ರಕ್ಷಣಾಧಿಕಾರಿ ಪ್ರಸ್ತಾಪಿಸಿದರು.

SP-Mithun-Kumar-IPS-led-a-meeting-at-Hanagere-in-Thirthahalli-Taluk

ಯಾವೆಲ್ಲ ನಿರ್ಧಾರ ಪ್ರಕಟಿಸಿದರು?

ನಿರ್ಧಾರ 1 – ಪ್ರತಿ ಅಮವಾಸ್ಯೆ, ಗುರುವಾರ ಮತ್ತು ಭಾನುವಾರ TODAY NEWS BUG jpgಹಣಗೆರೆಕಟ್ಟೆ (Hanagere) ದೇವಸ್ಥಾನಕ್ಕೆ ಅಧಿಕ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಇದರಿಂದ ಸಂಚಾರ ದಟ್ಟಣೆ ಉಂಟಾಗುತ್ತದೆಂದು ಸಭೆಯಲ್ಲಿ ಚರ್ಚೆಯಾಗಿದೆ. ಈ ಹಿನ್ನೆಲೆ ಆಯಾ ದಿನಗಳಂದು ಸುಗಮ ಸಂಚಾರ ಮತ್ತು ಭದ್ರಾತೆ ಹಿತದೃಷ್ಠಿಯಿಂದ ಹೆಚ್ಚಿನ ಪೊಲೀಸ್ ಸಿಬ್ಬಂದಿ ಮತ್ತು ಹೋಂ ಗಾರ್ಡ್‌ ನಿಯೋಜಿಸಿ, ಬ್ಯಾರಿಕೇಡ್ ಅಳವಡಿಸಿ ಕ್ರಮ ಕೈಗೊಳ್ಳಲಾಗುವುದು.

ನಿರ್ಧಾರ 2 – ಹಣಗೆರೆ ಕಟ್ಟೆ ದೇವಸ್ಥಾನಕ್ಕೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವಂತೆ ಮತ್ತು ಇನ್ನು ಹೆಚ್ಚಿನ ಬ್ಯಾರಿಕೇಡ್  ಗಳನ್ನು ಒದಗಿಸುವಂತೆ ಕೋರಲಾಗಿದೆ. ಈ ಕುರಿತಂತೆ ಮುಜರಾಯಿ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಸಿ.ಸಿ ಟಿವಿ ಕ್ಯಾಮೆರಾಗಳ ಅಳವಡಿಕೆ ಮತ್ತು ಬ್ಯಾರಿಕೇಡ್ ಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು.

SP Mithun Kumar IPS Meeting at hanagere in Thirthahalli

ನಿರ್ಧಾರ 3 – ಹಣಗೆರೆಕಟ್ಟೆಯಲ್ಲಿ ಎಲ್ಲಾ ಸಮುದಾಯದ ಜನರು ಸೌಹಾರ್ದತೆಯಿಂದಿದ್ದಾರೆ. ಸೌಹಾರ್ದತೆಗೆ ಮತ್ತು ಕಾನೂನು ಸುವ್ಯಸ್ಥೆಗೆ ಧಕ್ಕೆ ತರುವಂತಹದ್ದು ಕಂಡುಬಂದಲ್ಲಿ, ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು.

ನಿರ್ಧಾರ 4 – ಗ್ರಾಮದ ಎಲ್ಲಾ ವರ್ಗದ ಸದಸ್ಯರುಗಳನ್ನೊಳಗೊಂಡ ಬೀಟ್ ಸಮಿತಿ ರಚನೆ. ಬೀಟ್ ಸಿಬ್ಬಂದಿ ನಿರಂತರವಾಗಿ ಗ್ರಾಮಕ್ಕೆ ಭೇಟಿ ನೀಡಿ, ಬೀಟ್ ಸಮಿತಿ ಸಭೆ ನಡೆಸಿ, ಕುಂದು ಕೊರತೆ ಆಲಿಸಲಿದ್ದಾರೆ.

COMING UP1 jpg

ನಿರ್ಧಾರ 5 – ಗ್ರಾಮದಲ್ಲಿನ ಯುವಕರುಗಳನ್ನು ಗುರುತಿಸಿ, ಯುವ ಪಡೆಯನ್ನು ರಚಿಸಿ, ಅವರುಗಳು ಬೀಟ್ ಸಿಬ್ಬಂದಿಗಳೊಂದಿಗೆ ಗಸ್ತು ಮಾಡಬೇಕು. ಗ್ರಾಮದಲ್ಲಿ ಜರುಗುವ ಘಟನೆ ಮತ್ತು ಕಾನೂನು ಬಾಹಿರ ಚಟುವಟಿಕೆ ಮಾಹಿತಿ ಪೊಲೀಸ್ ಇಲಾಖೆಗೆ ನೀಡಬೇಕು.

SP Mithun Kumar IPS Meeting at hanagere in Thirthahalli

ನಿರ್ಧಾರ 6 – ಪ್ರತಿ ಅಮಾವಾಸ್ಯೆ, ಭಾನುವಾರ ಮತ್ತು ಗುರುವಾರಗಳಂದು ಹಣಗೆರೆಕಟ್ಟೆಯಲ್ಲಿ ಹೆಚ್ಚಿನ ಸಾರ್ವಜನಿಕರು ಬರುವುದರಿಂದ, ಯುವ ಪಡೆಯ ಸದಸ್ಯರು ಆ ದಿನಗಳಂದು ಹಾಜರಿದ್ದು ಸುಗಮ ಸಂಚಾರ ವ್ಯವಸ್ಥೆಗೆ ಪೊಲೀಸ್ ಇಲಾಖೆಗೆ ಸಹಕರಿಸಬಹುದು.

ನಿರ್ಧಾರ 7 – ಹಣಗೆರೆಕಟ್ಟೆಯಲ್ಲಿ ERSS – 112 ವಾಹನದ ಗಸ್ತನ್ನು ಹೆಚ್ಚಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಹಣಗೆರೆ ಕಟ್ಟೆಯ ಕಡೆಗೆ ERSS – 112 ವಾಹನದ ಗಸ್ತು ಹೆಚ್ಚಿಸಲಾಗುವುದು. ತುರ್ತು ಸಂದರ್ಭ ERSS – 112  ಸಹಾಯವಾಣಿಗೆ ಕರೆಮಾಡಿ ಪೊಲೀಸ್ ಸಹಾಯ ಪಡೆದುಕೊಳ್ಳಬಹುದು.

ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತರ, ಪ್ರೊಬೆಷನರಿ ಪೊಲೀಸ್‌ ಉಪಾಧೀಕ್ಷಕ ಮಂಜುನಾಥ್, ಮಾಳೂರು ಇನ್ಸ್‌ಪೆಕ್ಟರ್‌ ಪ್ರವೀಣ್ ನೀಲಮ್ಮ ನವರ್, ಸಬ್‌ ಇನ್ಸ್‌ಪೆಕ್ಟರ್‌ಗಳಾದ ನವೀನ್ ಕುಮಾರ್ ಮಠಪತಿ, ಶಿವಾನಂದ್, ಹಣಗೆರೆಕಟ್ಟೆ ಪಿಡಿಒ ಸಂತೋಷ್, ಹಣಿಗೆರೆಕಟ್ಟೆಯ ಗ್ರಾಮಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

million%20page%20views

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 14, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment