ಮುಡುಬಾ, ತೂದೂರು ಭಾಗದ ರೈತರಿಂದ ದೂರು, ಶಿವಮೊಗ್ಗ ರಾಗಿಗುಡ್ಡದ ವ್ಯಕ್ತಿ ಅರೆಸ್ಟ್‌, ಏನಿದು ಕೇಸ್‌?

ತೀರ್ಥಹಳ್ಳಿ: ತಾಲೂಕಿನ ಮುಡುಬಾ, ಹೊಸಳ್ಳಿ ಹಾಗೂ ತೂದೂರು ಗ್ರಾಮಗಳ ವ್ಯಾಪ್ತಿಯಲ್ಲಿ ನೀರಿನ ಮೋಟಾರ್‌ಗೆ ಅಳವಡಿಸಿದ್ದ ಕೇಬಲ್ ಕದಿಯುತ್ತಿದ್ದ ಕಳ್ಳನನ್ನು ಮಾಳೂರು ಪೊಲೀಸರು ಬಂಧಿಸಿದ್ದಾರೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ನಗರದ ರಾಗಿಗುಡ್ಡ ನಿವಾಸಿ ಕುಮಾರ ಎಸ್.ಕೆ. (31) ಬಂಧಿತ ಆರೋಪಿ. ಆತನಿಂದ ₹93,000 ಮೌಲ್ಯದ 750 ಮೀಟರ್ ಉದ್ದದ ಕೇಬಲ್ ವೈರ್ ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ್ದ ₹30,000 ಮೌಲ್ಯದ ಪಲ್ಸರ್ ಬೈಕನ್ನು ಅಮಾನತುಪಡಿಸಲಾಗಿದೆ.

Thirthahalli-Malur-Police-arrest-Cable-thief

ಏನಿದು ಪ್ರಕರಣ?

ತುಂಗಾ ನದಿ ತೀರದಲ್ಲಿ ರೈತರು ತೋಟಗಳಿಗೆ ನೀರು ಹಾಯಿಸಲು ಮೋಟಾರ್‌ಗಳನ್ನು ಅಳವಡಿಸಿದ್ದರು. ಈ ಪಂಪ್‌ಸೆಟ್‌ಗಳ ಕೇಬಲ್ ವೈರುಗಳು ಕಳ್ಳತನವಾಗಿದ್ದವು. ಈ ಬಗ್ಗೆ ರೈತರಾದ ಎನ್. ವೆಂಕಟೇಶ್, ರಾಜೇಂದ್ರ ಹೆಚ್.ಎಸ್. ಮತ್ತು ಶಶಿಮೋಹನ ಅವರು ಮಾಳೂರು ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಪತ್ತೆಗೆ ವಿಶೇಷ ತಂಡ ರಚಿಸಿದ್ದರು.

ಶಿವಮೊಗ್ಗದಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ

ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಹಾಗೂ ಹೆಚ್ಚುವರಿ ಎಸ್‌ಪಿ ಕಾರಿಯಪ್ಪ ಎ.ಜಿ. ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಯಿತು. ತೀರ್ಥಹಳ್ಳಿ ಡಿವೈಎಸ್‌ಪಿ ಅರವಿಂದ್ ಎನ್. ಕಲಗುಚ್ಚಿ ಮತ್ತು ಮಾಳೂರು ವೃತ್ತ ನಿರೀಕ್ಷಕ ರಾಜಶೇಖರ್ ಎಲ್. ಅವರ ಉಸ್ತುವಾರಿಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಮಾಳೂರು ಠಾಣೆ ಪಿಎಸ್‌ಐ ಸುನೀಲ್ ಬಿ.ಸಿ. ನೇತೃತ್ವದ ತಂಡದಲ್ಲಿ ಎಎಸ್‌ಐಗಳಾದ ನಾಗರಾಜ್ ಬಿ., ಸುರೇಶ್ ಎನ್, ಸಿಬ್ಬಂದಿ ಸುರಕ್ಷಿತ್, ಪುನೀತ್ ಕುಮಾರ್, ಕೇಶವಮೂರ್ತಿ, ಸಂತೋಷ್ ಕುಮಾರ್, ಚೇತನ್ ಕುಮಾರ್, ಸುಧಾಕರ್, ಸಾದುದ್ದೀನ್, ಮಂಜು, ವಸಂತ ಹಾಗೂ ಆಗುಂಬೆ ಠಾಣೆಯ ಸುರೇಶ್ ನಾಯ್ಕ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡು ಆರೋಪಿಯನ್ನು ಬಂಧಿಸಿದ್ದಾರೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion