ಹಣಗೆರೆಯಲ್ಲಿ ಹುಂಡಿ ಕಾಣಿಕೆ ಎಣಿಕೆಗೆ ಬಂದಿದ್ದ ತಹಶೀಲ್ದಾರ್ ಗೆ ಘೇರಾವ್, 2 ಗಂಟೆ ವಾಗ್ವಾದ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS |6 JANUARY 2023

THIRTHAHALLI : ಹಣಗೆರೆಯ (hanagere) ಶ್ರೀ ಭೂತರಾಯ ಚೌಡೇಶ್ವರಿ ಹಾಗೂ ಸೈಯದ್ ಸಾದತ್ ದರ್ಗಾದಲ್ಲಿ ಹುಂಡಿ ಎಣಿಕೆ ಕಾರ್ಯಕ್ಕೆ ಆಗಮಿಸಿದ್ದ ತಹಶೀಲ್ದಾರ್ ಅವರಿಗೆ ಸ್ಥಳೀಯರು ಘೇರಾವ್ ಹಾಕಿದ್ದಾರೆ. 2 ಗಂಟೆಗು ಹೆಚ್ಚು ಹೊತ್ತು ವಾಗ್ವಾದ ನಡೆಸಿದರು.

ತಹಶೀಲ್ದಾರ್ ಅಮೃತ್ ಅತ್ರೇಶ್ ಅವರು ಗುರುವಾರ ಹುಂಡಿ ಎಣಿಕೆ ಕಾರ್ಯಕ್ಕಾಗಿ ಹಣಗೆರೆಯ (hanagere) ಭಾವೈಕ್ಯತೆಯ ಶ್ರದ್ಧಾ ಕೇಂದ್ರಕ್ಕೆ ಆಗಮಿಸಿದ್ದರು. ಈ ವೇಳೆ ಸ್ಥಳೀಯರು ಅವರಿಗೆ ಘೇರಾವ್ ಹಾಕಿದರು. ತಮ್ಮ ಬೇಡಿಕೆ ಈಡೇರಿಸದಿರುವ ಕುರಿತು ತರಾಟೆಗೆ ತೆಗೆದುಕೊಂಡರು.

ಸ್ಥಳೀಯರ ಬೇಡಿಕೆಗಳೇನು?

ಹಣಗೆರೆಯ (hanagere) ಶ್ರದ್ಧಾಕೇಂದ್ರಕ್ಕೆ ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಆದರೆ ಇಲ್ಲಿ ಮೂಲ ಸೌಕರ್ಯಗಳಿಲ್ಲ. ಭಕ್ತರಿಗೆ ಉಳಿದುಕೊಳ್ಳಲು ವಸತಿ ವ್ಯವಸ್ಥೆ ಇಲ್ಲ. 2 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಿ ಉದ್ಘಾಟಿಸಲಾಗಿದೆ. ಅದು ಉಪಯೋಗಕ್ಕೆ ಲಭ್ಯವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Shimoga Live News reach

ಗ್ರಾಮದಲ್ಲಿ ಕಳ್ಳತನ ಪ್ರಕರಣಗಳು, ಗಲಾಟೆಗಳು ಹೆಚ್ಚಾಗಿವೆ. ಇಲ್ಲಿ ಪೊಲೀಸ್ ಚೌಕಿ ನಿರ್ಮಿಸುವಂತೆ ಹತ್ತಾರು ಬಾರಿ ಮನವಿ ಮಾಡಿದರು ಪ್ರಯೋಜನವಾಗಿಲ್ಲ. ಮಹಿಳೆಯರು, ಮಕ್ಕಳಿಗೆ ಶೌಚಾಲಯದ ವ್ಯವಸ್ಥೆ ಇಲ್ಲ. ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಸರಿಯಿಲ್ಲ. ಚಪ್ಪಲಿ ಸ್ಟಾಂಡ್ ಇಲ್ಲ. ದೇಗುಲದೊಳಗೆ ಸರತಿಯಲ್ಲಿ ಹೋಗಿ ಬರುವ ವ್ಯವಸ್ಥೆ ಇಲ್ಲ. ಪುಷ್ಕರಣಿಯನ್ನು ಸ್ವಚ್ಛಗೊಳಿಸುತ್ತಿಲ್ಲ ಎಂದು ಸಾಲು ಸಾಲು ಸಮಸ್ಯೆಗಳನ್ನು ತಹಶೀಲ್ದಾರ್ ಗಮನಕ್ಕೆ ತೆರಲಾಯಿತು.

2 ಗಂಟೆಗೂ ಹೆಚ್ಚು ಹೊತ್ತು ವಾಗ್ವಾದ

ತಹಶೀಲ್ದಾರ್ ಅಮೃತ್ ಅತ್ರೇಶ್ ಅವರೊಂದಿಗೆ ಸ್ಥಳೀಯರು ಸುಮಾರು 2 ಗಂಟೆ ಹೊತ್ತು ವಾಗ್ವಾದ ನಡೆಸಿದರು. ‘ದೇವಸ್ಥಾನದ ಹಣ ಬೇಕು, ಆದರೆ ಇಲ್ಲಿ ಅಭಿವೃದ್ಧಿ, ಭದ್ರತೆ ಬೇಡವೆ’ ಎಂದು ಪ್ರಶ್ನಿಸಿದರು. ‘10 ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ’ ತಹಶೀಲ್ದಾರ್ ಭರವಸೆ ನೀಡಿದ ಬಳಿಕ ಹುಂಡಿಯಲ್ಲಿ ಕಾಣಿಕೆ ಎಣಿಕೆಗೆ ಅವಕಾಶ ಕಲ್ಪಿಸಲಾಯಿತು.

ಇದನ್ನೂ ಓದಿ – ಸಿಗಂದೂರಿಗೆ ತೆರಳಬೇಕಿದ್ದ ಬೆಂಗಳೂರು ರಿಯಲ್ ಎಸ್ಟೇಟ್ ಉದ್ಯಮಿಗೆ ಲಾಡ್ಜ್ ನಲ್ಲಿ ಹೃದಯಾಘಾತ

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋದಾ ಸುರೇಶ್, ಸದಸ್ಯರಾದ ರಾಘವೇಂದ್ರ, ಲೋಕೇಶ್, ಮಾಜಿ ಅಧ್ಯಕ್ ಕೆರೆಹಳ್ಳಿ ರಾಮಪ್ಪ, ಪ್ರಮುಖರಾದ ಸುನೀಲ್ ಕುಮಾರ್ ಶಿರನಲ್ಲಿ, ಕುಣಜೆ ಕಿರಣ್ ಪ್ರಭಾಕರ್, ಟಿ.ಪಿ.ನಾರಾಯಣಪ್ಪ ಸೇರಿ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 6, 2023

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment