ತೀರ್ಥಹಳ್ಳಿ ಅಕ್ರಮ ಮರಳು ದಂಧೆಕೋರರಿಗೆ ಶಾಕ್, ಏಕಕಾಲಕ್ಕೆ ಮರಳು ಅಡ್ಡೆಗಳ ಮೇಲೆ ಡಿಸಿಬಿ ರೇಡ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | 3 ಜನವರಿ 2019

ತೀರ್ಥಹಳ್ಳಿಯ ಅಕ್ರಮ ಮರಳು ದಂಧೆಕೋರರ ಜಿಲ್ಲಾ ಅಪರಾಧ ಪತ್ತೆ ದಳ (ಡಿಸಿಬಿ) ಚುರುಕು ಮುಟ್ಟಿಸಿದೆ. ಇವತ್ತು ಏಕಕಾಲಕ್ಕೆ ವಿವಿಧೆಡೆ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ ಡಿಸಿಬಿ ಪೊಲೀಸರು, ಸುಮಾರು 58 ಲೋಡ್ ಮರಳು ವಶಕ್ಕೆ ಪಡೆದಿದೆ.

ಎಲ್ಲೆಲ್ಲಿ ದಾಳಿಯಾಯ್ತು? ಎಷ್ಟೆಷ್ಟು ಮರಳು ಸಿಕ್ತು?

ದಾಳಿ 1 |

ಕುಶಾವತಿ ಹೊಳೆ ಹಾಗೂ ಮಜ್ಜಿಗೆ ಹೊಳೆ ಸೇರುವ, ಕಿತ್ತನೆಗದ್ದೆ ಗ್ರಾಮದ ಅವಿನ್ ಡಿಸೋಜ ಎಂಬುವರ ಮನೆ ಹಿಂಭಾಗದ ಹೊಳೆಪಾತ್ರದ ಮರಳು ಅಡ್ಡೆ ಮೇಲೆ ರೇಡ್ ಮಾಡಲಾಯಿತು. ಉತ್ತರ ಪ್ರದೇಶ ಮತ್ತು ಚಿತ್ರದುರ್ಗದ ಕೂಲಿ ಕಾರ್ಮಿಕರನ್ನು ಬಳಸಿಕೊಂಡು ಇಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಣೆ ಮಾಡಲಾಗುತ್ತಿತ್ತು.

49204602 767001796994576 7440388991817351168 n.jpg? nc cat=102& nc ht=scontent bom1 2

ದಾಳಿ 2 |

ಶಿರುಪತಿ ಗ್ರಾಮದ ಬಾಬು ಷಾ ಎಂಬುವವರ ಮನೆಯ ಕೋಳಿ ಪಾರಂ ಪಕ್ಕದಲ್ಲಿ, ಅಕ್ರಮವಾಗಿ ಸಂಗ್ರಹಿಸಿದ್ದ ಸುಮಾರು ಆರು ಲೋಡ್’ನಷ್ಟು ಮರಳು ವಶಕ್ಕೆ ಪಡೆಯಲಾಯಿತು.

FOUR LAKH VIEWS copy

ದಾಳಿ 3 |

ಕುರುವಳ್ಳಿ ಗ್ರಾಮದ ಯೋಗಿಂದ್ರ ಎಂಬುವವರು ಕುಶಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು, ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಮರಳು ವಶಕ್ಕೆ ಪಡೆಯಲಾಗಿದೆ.

49151013 767001780327911 121898172657172480 n.jpg? nc cat=100& nc ht=scontent bom1 2

ಯಾರೆಲ್ಲರ ಮೇಲೆ ಕೇಸ್? ಏನೇನು ಸೀಜ್?

ಶಿರುಪತಿ ಗ್ರಾಮದ ಬಾಬುಷಾ, ಅವಿನ್ ಡಿಸೋಜ, ಸೀಬಿನಕೆರೆಯ ಸುದೀಪ ಶೆಟ್ಟಿ, ಪಿಕಪ್ ಚಾಲಕ ನಂದನ್, ಟಿಪ್ಪರ್ ಚಾಲಕ ವರದರಾಜ್ ಸೇರಿದಂತೆ ಉತ್ತರಪ್ರದೇಶದ ಆರು ಮತ್ತು ಚಿತ್ರದುರ್ಗದ ಐವರು ಕೂಲಿ ಕಾರ್ಮಿಕರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 58 ಲೋಡ್ ದಾಸ್ತಾನು ಮರಳು, ಒಂದು ಟಿಪ್ಪರ್, ಒಂದು ಪಿಕಪ್ ವಾಹನ ವಶಕ್ಕೆ ಪಡೆಯಲಾಗಿದೆ.

ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ, ಹೆಚ್ಚುವರಿ ಎಸ್ಪಿ ಮುತ್ತುರಾಜ್ ಮಾರ್ಗದರ್ಶನದಲ್ಲಿ ಡಿಸಿಬಿ ಇನ್ಸ್’ಪೆಕ್ಟರ್ ಕುಮಾರ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಕರೆ ಮಾಡಿ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 3, 2019

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment