ಶಿವಮೊಗ್ಗ LIVE
ತೀರ್ಥಹಳ್ಳಿ: ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ (Ellamavasya Jatre) ಡಿ.17 ರಿಂದ 22ರವರೆಗೆ ₹25 ಲಕ್ಷ ವೆಚ್ಚದಲ್ಲಿ ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಮೇಶ್ವರ ಎಳ್ಳಮಾವಾಸ್ಯೆ ಜಾತ್ರೆಯ ಗೌರವಾಧ್ಯಕ್ಷ, ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಇದನ್ನೂ ಓದಿ » ಡೆವಿಲ್ ಸಿನಿಮಾ ಸಂಭ್ರಮಾಚರಣೆ ಮುಗಿಸಿ ತೆರಳುವಾಗ ಅಪಘಾತ, ಯುವಕ ಸಾವು

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ಡಿ.17 ರಂದು ಗಣಪತಿ ಪೂಜೆ, ಧ್ವಜಾರೋಹಣ, 18ರಂದು ಪುರೋತ್ಸವ, 19ರಂದು ಪರಶುರಾಮ ತೀರ್ಥಪೂಜೆ, ತೀರ್ಥಾಭಿಷೇಕ ಮತ್ತು ತೀರ್ಥಸ್ನಾನ ನಡೆಯಲಿದೆ. ಸಂಜೆ ಉದಯ ಕುಮಾರ್ ಶೆಟ್ಟಿ ತಂಡದಿಂದ ನೃತ್ಯ ವೈಭವ ಹಮ್ಮಿಕೊಳ್ಳಲಾಗಿದೆ ಎಂದರು.

ಡಿ.20ರಂದು ಮನ್ಮಹಾರಥಾರೋಹಣ, ಸಂಜೆ ಆರ್.ಜಿ. ಫಿಟೈಸ್ ಕ್ಲಬ್ ವತಿಯಿಂದ ದೇಹದಾರ್ಢ ಸ್ಪರ್ಧೆ, 21ರ ಸಂಜೆ ನಿಶಾ ಸ್ಪೋರ್ಟ್ಸ್ ಕ್ಲಬ್ನಿಂದ ತುಂಗಾ ನದಿಯ ದಡದ ಮರಳು ಗುಡ್ಡೆಯ ಮೇಲೆ ವಾಲಿಬಾಲ್ ಪಂದ್ಯಾವಳಿ, ನಂತರ ರಾಮಚಂದ್ರ ಹಡಪದ ತಂಡದಿಂದ ಸಂಗೀತ ಸಂಜೆ, ತುಂಗಾ ನದಿಯಲ್ಲಿ ಸಿಡಿ ಮದ್ದು ಪ್ರದರ್ಶನದೊಂದಿಗೆ ತೆಪ್ಪೋತ್ಸವ ನಡೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿ.ಆರ್.ರಾಘವೇಂದ್ರ ಶೆಟ್ಟಿ, ಪಾಂಡುರಂಗಪ್ಪ, ಗೀತಾ ರಮೇಶ್, ಜಯಪ್ರಕಾಶ್ ಶೆಟ್ಟಿ, ರತ್ನಾಕರ ಶೆಟ್ಟಿ, ಟಿ.ಜೆ.ಅನಿಲ್, ವರಲಕ್ಷ್ಮಿ, ಜ್ಯೋತಿ, ಸುರಭಿ ಕಿಶೋರ್, ನಯನ, ಅಮರನಾಥ ಶೆಟ್ಟಿ ಇದ್ದರು.
LATEST NEWS
- ಕುತ್ತಿಗೆ ಹಿಸುಕಿ ಹೆಂಡತಿಯನ್ನು ಕೊಂದ ಗಂಡ, ಎಲ್ಲಿ? ಕಾರಣವೇನು?

- ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್ | 12 ಜನವರಿ 2026 | ಅಡಿಕೆ ಧಾರಣೆ

- ನಿಯಂತ್ರಣ ತಪ್ಪಿದ ರಾಯಲ್ ಎನ್ಫೀಲ್ಡ್ ಬೈಕ್, ಅಪಘಾತ, ಸವಾರ ಸ್ಥಳದಲ್ಲೇ ಸಾವು

- ವೈನ್ ಶಾಪ್ನಲ್ಲಿ ಬಿಯರ್ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

- ‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

About The Editor
ನಿತಿನ್ ಆರ್.ಕೈದೊಟ್ಲು





