ತೀರ್ಥಹಳ್ಳಿಯ ರಂಜದಕಟ್ಟೆಯಲ್ಲಿ ಶತಮಾನದ ಸೇತುವೆ ಕುಸಿತ, ಉಡುಪಿ, ಮಂಗಳೂರು ಸಂಪರ್ಕ ಕಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 24 ಸೆಪ್ಟಂಬರ್ 2020

ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆಯಲ್ಲಿ ಸೇತುವೆ ಕುಸಿದಿದ್ದು ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದರಿಂದ ತೀರ್ಥಹಳ್ಳಿ, ಉಡುಪಿ, ಮಂಗಳೂರು ನಡುವೆ ರಾಷ್ಟ್ರೀಯ ಹೆದ್ದಾರಿ 169ಎ ಸಂಪರ್ಕ ಕಡಿತವಾಗಿದೆ.

https://www.facebook.com/liveshivamogga/videos/330732884677346/?t=0

ನೂರು ವರ್ಷ ಹಳೆ ಸೇತುವೆ

ಜೋರು ಮಳೆ ಮತ್ತು ಭಾರಿ ವಾಹನ ಸಂಚಾರದಿಂದ ಸೇತುವೆ ಶಿಥಿಲವಾಗಿತ್ತು. ನೂರು ವರ್ಷ ಹಳೆಯ ಸೇತುವೆಯನ್ನು ಸಂಪೂರ್ಣ ಇಟ್ಟಿಗೆಯಲ್ಲಿ ನಿರ್ಮಿಸಲಾಗಿತ್ತು. ಸೇತುವೆಯ ಒಂದು ಭಾಗದಲ್ಲಿ ಕುಸಿದಿದೆ. ಆರಂಭದಲ್ಲಿ ಬೈಕು, ಕಾರು ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಆದರೆ ಅವಘಡ ಸಂಭವಿಸುವ ಆತಂಕವಿದ್ದರಿಂದ ಸೇತವೆ ಮೇಲೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

120105587 1223224024705682 8920400996315892960 n.jpg? nc cat=103& nc sid=110474& nc ohc=rRDpFg 6yl0AX auom6& nc ht=scontent.fixe1 1

ಉಡುಪಿ, ಮಂಗಳೂರಿಗೆ ಸಂಪರ್ಕ ಕಟ್

ಸೇತುವೆ ಕುಸಿದಿರುವುದರಿಂದ ತೀರ್ಥಹಳ್ಳಿ ತಾಲೂಕಿನಿಂದ ಉಡುಪಿ, ಮಂಗಳೂರು ನಡುವೆ ಸಂಪರ್ಕ ಕಡಿತವಾಗಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಯಿಂದ ಈ ಮಾರ್ಗವಾಗಿ ಹಲವರು ಮಣಿಪಾಲ ಆಸ್ಪತ್ರೆಗೆ ತೆರಳುತ್ತಿದ್ದರು. ಆದರೆ ಸೇತುವೆ ಕುಸಿತದಿಂದ ಚಿಕಿತ್ಸೆಗೆ ತೆರಳುವವರು ಬದಲಿ ಮಾರ್ಗದಲ್ಲಿ ಸಂಚರಿಸುವಂತಾಗಿದೆ.

120159115 1223223468039071 7638582736998154936 n.jpg? nc cat=106& nc sid=110474& nc ohc=NcSA0eGy8hQAX9UpaGC& nc ht=scontent.fixe1 1

ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ

ಸೇತುವೆ ಶಿಥಿಲವಾಗಿರುವ ಕುರಿತು ಸ್ಥಳೀಯರು ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದ್ದರು. ಆದರೆ ದುರಸ್ಥಿ ಕಾರ್ಯ ನಡೆದಿರಲಿಲ್ಲ. ಸೇತುವೆ ಮೇಲೆ ಗಿಡಗಳು ಬೆಳೆದಿದ್ದವು. ಇತ್ತೀಚೆಗೆ ಭಾರಿ ಮಳೆ ಸುರಿಯುತ್ತಿದ್ದಾಗ, ಸಮೀಪದ ಮೋರಿ ನೀರಿನ್ನು ಸೇತುವೆ ಮೇಲೆ ಹರಿಯುವಂತೆ ಬಿಡಲಾಗಿತ್ತು. ಇದು ಸೇತುವೆ ಕುಸಿಯಲು ಪ್ರಮುಖ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 24, 2020

Leave a Comment