ರಂಜದಕಟ್ಟೆಯಲ್ಲಿ ಸೇತುವೆ ಪುನರ್ ನಿರ್ಮಾಣ, ತೀರ್ಥಹಳ್ಳಿ, ಆಗುಂಬೆ, ಮಣಪಾಲ್, ಉಡುಪಿ ಸಂಚಾರ ಸರಾಗ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 3 ಅಕ್ಟೋಬರ್ 2020

ಶತಮಾನದ ಸೇತುವೆ ಕುಸಿದು ಸ್ಥಗಿತವಾಗಿದ್ದ ತೀರ್ಥಹಳ್ಳಿ ಆಗುಂಬೆ ವಾಹನ ಸಂಚಾರ ಪುನಾರಂಭವಾಗಿದೆ. ಲಾರಿ, ಬಸ್ಸುಗಳು ಸೇರಿ ಎಲ್ಲ ವಾಹನಗಳು ಸಂಚಾರ ಸರಾಗವಾಗಿದೆ.

ರಾಷ್ಟ್ರೀಯ ಹೆದ್ದಾರಿ 169ರಲ್ಲಿ ರಂಜದಕಟ್ಟೆ ಬಳಿ ಸೇತುವೆ ಕುಸಿದಿತ್ತು. ಶತಮಾನದ ಹಿಂದೆ ನಿರ್ಮಿಸಲಾಗಿದ್ದ ಸೇತುವೆ, ನಿರ್ವಹಣೆಯ ಕೊರತೆಯಿಂದಾಗಿ ಕುಸಿತ ಕಂಡಿತ್ತು. ಹಾಗಾಗಿ ವಾಹನ ಸಂಚಾರ ನಿರ್ಬಂಧಿಸಿ ಪರ್ಯಾಯ ಮಾರ್ಗ ಸೂಚಿಸಲಾಗಿತ್ತು. ಸೇತುವೆ ಕುಸಿದ ಜಾಗದಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ.

VIDEO REPORT

ತಾತ್ಕಾಲಿಕವಾಗಿ ನಿರ್ಮಾಣ ಮಾಡಿರುವ ಸೇತುವೆ ಮೇಲೆ ಬಸ್ಸು, ಲಾರಿ ಸೇರಿದಂತೆ ಎಲ್ಲ ಬಗೆಯ ವಾಹನಗಳು ಸಂಚರಿಸಬಹುದಾಗಿದೆ. ಹಗಲು, ರಾತ್ರಿ ಕೆಲವ ಮಾಡಿ, ಕೆಲವೆ ಗಂಟೆಯಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದೆ. ನೀರು ಸರಾಗವಾಗಿ ಹರಿದು ಹೋಗಲು ಪೈಪುಗಳನ್ನು ಅಳವಡಿಸಿ, ಮಣ್ಣು ಹಾಕಿ ಭದ್ರವಾಗಿ ಸೇತುವೆ ನಿರ್ಮಿಸಲಾಗಿದೆ.

ನ್ಯಾಷನಲ್ ಕನ್ಸ್ ಟ್ರಕ್ಷನ್ ಸಂಸ್ಥೆ ತುರ್ತಾಗಿ ತಾತ್ಕಾಲಿಕ ಸೇತುವೆ ನಿರ್ಮಿಸಿದೆ. ಇದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ತೀರ್ಥಹಳ್ಳಿಯಿಂದ ಆಗುಂಬೆ, ಮಣಿಪಾಲ, ಉಡುಪಿ, ಮಂಗಳೂರು ನಡುವೆ ವಾಹನ ಸಂಚಾರ ಪುನಃ ಆರಂಭವಾದಂತಾಗಿದೆ.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment