| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 25 ಜುಲೈ 2019
ನಿಯಮ ಉಲ್ಲಂಘಿಸಿ ನದಿ ಮಧ್ಯ ಭಾಗದಿಂದ ಮರಳು ತೆಗೆಯುತ್ತಿದ್ದ ಆರೋಪದ ಮೇಲೆ, ತೀರ್ಥಹಳ್ಳಿ ತಾಲೂಕಿನ ಹುಣಸವಳ್ಳಿಯಲ್ಲಿ ಮರಳು ಗಣಿಗಾರಿಕೆಯ ಗುತ್ತಿಗೆಯನ್ನು ರದ್ದುಪಡಿಸಲಾಗಿದೆ.
ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರ ಆದೇಶದ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಹುಣಸವಳ್ಳಿಯ ಸರ್ವೇ ನಮಬರ್ 11,12 ಮತ್ತು 13ರಲ್ಲಿ ಮರಳು ಗಣಿಗಾರಿಕೆ ನಡೆಸಲು ನೀಡಿದ್ದ ಗುತ್ತಿಗೆಯನ್ನು ರದ್ದುಪಡಿಸಿದೆ. ಭದ್ರಾವತಿಯ ಬಸವೇಶ್ವರ ಟ್ರೇಡಿಂಗ್ ಸಂಸ್ಥೆಗೆ 2018ರಿಂದ ಐದು ವರ್ಷ ಮರಳು ಗಣಿಗಾರಿಕೆಗೆ ಗುತ್ತಿಗೆ ನೀಡಲಾಗಿತ್ತು. ಆದರೆ ನಿಯಮ ಉಲ್ಲಂಘಿಸಿದ್ದರಿಂದ ಗುತ್ತಿಗೆ ರದ್ದುಪಡಿಸಲು ಸೂಚಿಸಲಾಗಿದೆ.
ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಸಂಬಂಧ ವಕೀಲ ಕುಮಾರ್ ಆಚಾರ್ ಅವರು ಹೈಕೋರ್ಟ್’ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿದ್ದ ಫೋಟೊಗಲು ಮತ್ತು ದಾಖಲಾತಿಯನ್ನು ಸಾಕ್ಷ್ಯವಾಗಿ ಪರಿಗಣಿಸಿದ ನ್ಯಾಯಾಲಯ ಪ್ರಕರಣದ ಅನುಸಾರಣಾ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಜುಲೈ 9ರಂದು ಹೈಕೊರ್ಟ್ ಆದೇಶಿಸಿತ್ತು.
ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಮರಳುಗಾರಿಗೆ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು. ಇದರ ವಿಡಿಯೋ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿವಮೊಗ್ಗದಲ್ಲಿ 300 ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ, ಇಲ್ಲಿವೆ ಸಾಲು ಸಾಲು ಫೋಟೊಗಳು
- ಇವತ್ತು ಉತ್ತರಾಷಾಢ ನಕ್ಷತ್ರ, ದ್ವಾದಶಿ, ರಾಶಿ ಫಲ ಹೇಗಿದೆ? – ಓದಲು ಇಲ್ಲಿ ಕ್ಲಿಕ್ ಮಾಡಿ
- ಶಿವಮೊಗ್ಗದ ಜೊತೆಗೆ ಶಾಮನೂರು ನಂಟು, ಇಲ್ಲಿತ್ತು ವ್ಯಾವಹಾರಿಕ ಸಂಬಂಧ, ಶಿಷ್ಯರ ಬಳಗ, ಚಿಕ್ಕಮ್ಮನ ಮನೆ
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
![]()