ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 25 ಜುಲೈ 2019
ನಿಯಮ ಉಲ್ಲಂಘಿಸಿ ನದಿ ಮಧ್ಯ ಭಾಗದಿಂದ ಮರಳು ತೆಗೆಯುತ್ತಿದ್ದ ಆರೋಪದ ಮೇಲೆ, ತೀರ್ಥಹಳ್ಳಿ ತಾಲೂಕಿನ ಹುಣಸವಳ್ಳಿಯಲ್ಲಿ ಮರಳು ಗಣಿಗಾರಿಕೆಯ ಗುತ್ತಿಗೆಯನ್ನು ರದ್ದುಪಡಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರ ಆದೇಶದ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಹುಣಸವಳ್ಳಿಯ ಸರ್ವೇ ನಮಬರ್ 11,12 ಮತ್ತು 13ರಲ್ಲಿ ಮರಳು ಗಣಿಗಾರಿಕೆ ನಡೆಸಲು ನೀಡಿದ್ದ ಗುತ್ತಿಗೆಯನ್ನು ರದ್ದುಪಡಿಸಿದೆ. ಭದ್ರಾವತಿಯ ಬಸವೇಶ್ವರ ಟ್ರೇಡಿಂಗ್ ಸಂಸ್ಥೆಗೆ 2018ರಿಂದ ಐದು ವರ್ಷ ಮರಳು ಗಣಿಗಾರಿಕೆಗೆ ಗುತ್ತಿಗೆ ನೀಡಲಾಗಿತ್ತು. ಆದರೆ ನಿಯಮ ಉಲ್ಲಂಘಿಸಿದ್ದರಿಂದ ಗುತ್ತಿಗೆ ರದ್ದುಪಡಿಸಲು ಸೂಚಿಸಲಾಗಿದೆ.
ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಸಂಬಂಧ ವಕೀಲ ಕುಮಾರ್ ಆಚಾರ್ ಅವರು ಹೈಕೋರ್ಟ್’ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಅವರು ಸಲ್ಲಿಸಿದ್ದ ಫೋಟೊಗಲು ಮತ್ತು ದಾಖಲಾತಿಯನ್ನು ಸಾಕ್ಷ್ಯವಾಗಿ ಪರಿಗಣಿಸಿದ ನ್ಯಾಯಾಲಯ ಪ್ರಕರಣದ ಅನುಸಾರಣಾ ವರದಿ ನೀಡುವಂತೆ ಜಿಲ್ಲಾಡಳಿತಕ್ಕೆ ಜುಲೈ 9ರಂದು ಹೈಕೊರ್ಟ್ ಆದೇಶಿಸಿತ್ತು.
ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಮರಳುಗಾರಿಗೆ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು. ಇದರ ವಿಡಿಯೋ ಇಲ್ಲಿದೆ
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]