ಆಗುಂಬೆ: ಅಪಘಾತಕ್ಕೀಡಾದ ಕಾರಿನಲ್ಲಿದ್ದ ಮೊಬೈಲ್ ಫೋನ್ಗಳು (Smart Phones) ಮತ್ತು ಪರ್ಸ್ ಕಳ್ಳತನವಾಗಿದೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ಇದನ್ನೂ ಓದಿ:➤ ಕೋರ್ಟ್ ಮೊರೆ ಹೋದ ಟೆಲಿಗ್ರಾಂ ಆ್ಯಪ್, ಕೇಂದ್ರ ಸರ್ಕಾರದ ಸಮರ್ಥನೆ ಏನು? ಟೆಲಿಗ್ರಾಂ ಸಂಸ್ಥೆ ಹೇಳಿದ್ದೇನು?
ದಕ್ಷಿಣ ಕನ್ನಡ ಜಿಲ್ಲೆಯ ಶಾಜ್ಮಾನ್ ಎಂಬುವವರು ಸಹೋದರನಿಗೆ ತೀರ್ಥಹಳ್ಳಿಯ ನಾಟಿ ವೈದ್ಯರೊಬ್ಬರ ಬಳಿ ಚಿಕಿತ್ಸೆಗೆ ಕರೆತರುತ್ತಿದ್ದರು. ಕೌರಿಹಕ್ಲುವಿನಲ್ಲಿ ಕಾರು ಅಪಘಾತಕ್ಕೀಡಾಗಿ, ಕಾರಿನಲ್ಲಿದ್ದವರನ್ನು ಆಂಬುಲೆನ್ಸ್ನಲ್ಲಿ ಮಣಿಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಚಿಕಿತ್ಸೆ ಬಳಿಕ ಬಂದು ಪರಿಶೀಲಿಸಿದಾಗ ಕಾರಿನಲ್ಲಿದ್ದ ₹1.17 ಲಕ್ಷದ ಐ ಫೋನ್, ₹30 ಸಾವಿರದ ಸ್ಯಾಮ್ಸಂಗ್ ಫೋನ್, ಪರ್ಸ್ ಮತ್ತು ಅದರೊಳಗಿದ್ದ ₹15 ಸಾವಿರ ನಗದು ಕಳ್ಳತನವಾಗಿತ್ತು. ಈ ಸಂಬಂಧ ಕಾರು ಮಾಲೀಕ ಶಾಜ್ಮಾನ್ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಬೆಳ್ಳಂಬೆಳಗ್ಗೆ ನಿರ್ಮಾಣ ಹಂತದ ಮನೆ ಬಳಿ ಬಂದ ಮಾಲೀಕನಿಗೆ ಕಾದಿತ್ತು ಶಾಕ್, ಆಗಿದ್ದೇನು?

Smart Phones theft from car

