ಗೊಂದಲ ಬಗೆಹರಿದರು ಮೊದಲ ಪಟ್ಟಿಯಲ್ಲಿ ತೀರ್ಥಹಳ್ಳಿ ನಾಪತ್ತೆ, ಕಾರಣವೇನು? ಏನಂತಾರೆ ಮಾಜಿ ಮಿನಿಸ್ಟರ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 MARCH 2023

ELECTION NEWS LOGO jpgTHIRTHAHALLI : ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ (Congress List) ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟಿಸದಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಟಿಕೆಟ್ ವಿಚಾರ ಕ್ಷೇತ್ರದಲ್ಲಿ ಕುತೂಹಲ ಮೂಡಿಸಿದೆ.

ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿದ್ದ ಗೊಂದಲ ನಿವಾರಣೆಯಾಗಿದೆ. ಇನ್ನೇನಿದ್ದರು ಪಟ್ಟಿ ಪ್ರಕಟವಾಗುವುದೊಂದೆ (Congress List) ಬಾಕಿ ಎಂದ ಹೇಳಲಾಗಿತ್ತು. ಆದರೆ ಮೊದಲ ಪಟ್ಟಿಯಲ್ಲಿ ಕ್ಷೇತ್ರದ ಅಭ್ಯರ್ಥಿಯ ಹೆಸರು ಕಾಣದಿರುವುದು ಕುತೂಹಲ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ.

RM-Manjunatha-Gowda-and-Kimmane-Rathnakar

ಒಂದಾಗಿದ್ದೇವೆ ಎಂದು ಬಿಂಬಿಸಿದ್ದರು

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರ ನಡುವೆ ಭಿನ್ನಾಭಿಪ್ರಾಯ ಬಹಿರಂಗ ಸತ್ಯ. ಇಬ್ಬರು ನಾಯಕರು ಪ್ರತ್ಯೇಕವಾಗಿ ಪ್ರಚಾರ, ಹೋರಾಟ, ಪಾದಯಾತ್ರೆಗಳನ್ನು ನಡೆಸುತ್ತಿದ್ದರು. ಈಚೆಗೆ ತೀರ್ಥಹಳ್ಳಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಬ್ಬರನ್ನು ಒಂದುಗೂಡಿಸಿದ್ದರು. ಅಲ್ಲದೆ, ‘ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಇಬ್ಬರನ್ನೂ ನಾನು ವಿಧಾನಸೌಧದಲ್ಲಿ ನೋಡಬೇಕು ಅಂದುಕೊಂಡಿದ್ದೇನೆ’ ಎಂದು ಹೇಳಿಕೆ ನೀಡಿದ್ದರು.

Shree Refrigeration Shimoga

ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯಂತೆ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಅವರ ಪೈಕಿ, ಒಬ್ಬರು ವಿಧಾನಸಭೆಗೆ ಪ್ರವೇಶಿಸುತ್ತಾರೆ. ಮತ್ತೊಬ್ಬರು ವಿಧಾನ ಪರಿಷತ್ ಸದಸ್ಯರಾಗಲಿದ್ದಾರೆ ಎಂಬ ಲೆಕ್ಕಾಚಾರ ಶುರುವಾಗಿತ್ತು. ಆ ಬಳಿಕ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಅವರು ಜೊತೆ ಜೊತೆಗೆ ಕಾಣಿಸಿಕೊಂಡರು, ದೇಗುಲ, ಪೂಜೆಗಳಲ್ಲಿ ಭಾಗಿಯಾಗಿದ್ದರು.

ಪಟ್ಟಿಯಿಂದ ತೀರ್ಥಹಳ್ಳಿಯಲ್ಲಿ ಅಚ್ಚರಿ

ಗೊಂದಲವಿಲ್ಲದ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಪಕ್ಷ ಮೊದಲ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ತೀರ್ಥಹಳ್ಳಿ ಕ್ಷೇತ್ರದಲ್ಲಿಯು ಗೊಂದಲ ನಿವಾರಣೆ ಆಗಿರುವುದರಿಂದ ಮೊದಲ ಪಟ್ಟಿಯಲ್ಲೇ ಕ್ಷೇತ್ರದ ಅಭ್ಯರ್ಥಿ ಘೋಷಣೆಯಾಗುವ ನಿರೀಕ್ಷೆ ಕಾರ್ಯಕರ್ತರಲ್ಲಿತ್ತು. ಆದರೆ ಪಟ್ಟಿ ಬಿಡುಗಡೆ ಆಗುತ್ತಿದ್ದಂತೆ ನಿರಾಸೆ ಮತ್ತು ಅಸಮಾಧಾನ ಮೂಡಿದೆ.

ಇದನ್ನೂ ಓದಿ – ಕಾಂಗ್ರೆಸ್ ಮೊದಲ ಪಟ್ಟಿ, ಶಿವಮೊಗ್ಗ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟ, 4 ಕ್ಷೇತ್ರದಲ್ಲಿ ಇನ್ನೂ ಸಸ್ಪೆನ್ಸ್

ಇತ್ತ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, ‘ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ನಿಲುವಿನ ಬಗ್ಗೆ ಅಪಾರ ನಂಬಿಕೆ ಇದೆ. ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯವನ್ನು ಒಟ್ಟಿಗೆ ಕೊಂಡೊಯ್ಯುತ್ತಿದೆ. ಕಾರ್ಯಕರ್ತರು ಆತುರ ಬೇಡ ಸಮಾಧಾನದಿಂದ ಇರಿ ಎಂದಷ್ಟೆ ಹೇಳಿದ್ದಾರೆ. ಮೊದಲ ಪಟ್ಟಿಯಲ್ಲಿ ಹೆಸರು ಪ್ರಕಟವಾಗುವ ನಿರೀಕ್ಷೆ ಇತ್ತು. ಮುಂದಿನ ಪಟ್ಟಿಯಲ್ಲಿ ಬರಬಹುದು. ಜನರೊಂದಿಗೆ ಇದ್ದು ರಾಜಕಾರಣ ಮಾಡಿದ್ದೇನೆ. ಮುಂದೆಯು ಜನರೊಂದಿಗೆ ಇರುತ್ತೇನೆ’ ಎಂದು ತಿಳಿಸಿದರು.

Ayanuru Manjunath

ಮೊದಲ ಪಟ್ಟಿಯಿಂದ ತೀರ್ಥಹಳ್ಳಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಕ್ಷೇತ್ರದ ಜನರಲ್ಲಿ ಕುತೂಹಲ ಮತ್ತಷ್ಟು ಹೆಚ್ಚಾಗಿದೆ. ಮುಂದಿನ ಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು ಪ್ರಕಟವಾಗಲಿದೆಯ. ಹೆಸರು ಪ್ರಕಟವಾಗದಿದ್ದರೆ ಆಕಾಂಕ್ಷಿಗಳ ಮುಂದಿನ ನಿರ್ಧಾರವೇನು ಎಂಬುದರ ಕುರಿತು ಚರ್ಚೆಗಳು ಗರಿಗೆದರಿವೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 25, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment