ಕಾರು ಡಿಕ್ಕಿಯಾಗಿ ಮತ್ತೊಂದು ಕಾರಿನ ಚಾಲಕ ಸಾವು, ಹೇಗಾಯ್ತು ಘಟನೆ?

ತೀರ್ಥಹಳ್ಳಿ: ಶಿವರಾಜಪುರ ಬಳಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಮಾರುತಿ ಓಮ್ನಿಗೆ ಆಗುಂಬೆ ಕಡೆಯಿಂದ ಬಂದ ಕಾರು ಡಿಕ್ಕಿಯಾಗಿ (speeding car) ಓಮ್ನಿ ಚಾಲಕ ಮೃತಪಟ್ಟಿದ್ದಾರೆ. ಶಿವರಾಜಪುರದ ರಮೇಶ್ (51) ಸಾವಿಗೀಡಾದವರು. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಹೇಗಾಯ್ತು ಘಟನೆ?

Speeding-Car-hits-omni-car-in-Thirthahalli.

ಅಂಗಡಿ ನಡೆಸುತ್ತಿದ್ದ ರಮೇಶ್ ಅವರು ಭಾನುವಾರ ಬೆಳಗ್ಗೆ 7.30ಕ್ಕೆ ವ್ಯಾನ್‌ನಲ್ಲಿ ವಸ್ತುಗಳನ್ನು ಜೋಡಿಸುವ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದೆ. ತೀವ್ರ ಗಾಯಗೊಂಡಿದ್ದ ರಮೇಶ್ ಅವರನ್ನು ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಮಣಿಪಾಲಕ್ಕೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ.

ಶಿವಮೊಗ್ಗದಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ

190126 Speeding Car hits omni car in Thirthahalli

ಅಪಘಾತದ ದೃಶ್ಯ ಸಮೀಪದ ಗ್ಯಾರೇಜಿನ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ತೀರ್ಥಹಳ್ಳಿ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ 301 ಕಲಾವಿದರ ಜೊತೆಗೆ ವೀಣೆ ನುಡಿಸಿದ ಮೈಸೂರು ರಾಜವಂಶಸ್ಥ, ಹೇಗಿತ್ತು ಕಾರ್ಯಕ್ರಮ?

Total-Readers-of-Shivamogga-Live
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment