ಮಂಡಿ, ಕಾಲು ನೋವು, ಬಾಣಂತಿ ಸಾವು, ಆಗಿದ್ದೇನು?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ತೀರ್ಥಹಳ್ಳಿ: ಮಂಡಿ, ಕಾಲು ನೋವು (leg pain) ಕಾಣಿಸಿಕೊಂಡಿದ್ದ ಬಾಣಂತಿಯನ್ನು ಮಂಗಳವಾರ ಇಲ್ಲಿನ ಜೆ.ಸಿ.ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಾಲಿನ ಪ್ಯಾಕೆಟ್‌ ಕಳ್ಳರ ಹಾವಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ

ಕಾವ್ಯ ಸಿ.ಡಿ. (29) ಮೃತರು. ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮದ ಕಾವ್ಯ 5 ವರ್ಷಗಳ ಹಿಂದೆ ಮೇಳಿಗೆ ಗ್ರಾಮದ ಮಂಜುನಾಥ ಜತೆ ವಿವಾಹವಾಗಿದ್ದರು. ಗರ್ಭಿಣಿಯಾಗಿದ್ದ ಅವರಿಗೆ ಜನವರಿ 1 ರಂದು ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆತಂದಾಗ ಹೊಟ್ಟೆಯಲ್ಲಿಯೇ ಮಗು ಮೃತಪಟ್ಟಿರುವುದು ತಿಳಿದು ಬಂದಿತ್ತು.

eg-pain-thirthahalli-lady-dies.webp

ಅದಾದ ನಂತರ ದೇಮ್ಲಾಪುರದ ತಾಯಿ ಮನೆಯಲ್ಲಿ ಆರೈಕೆಯಲ್ಲಿದ್ದ ಅವರಿಗೆ ಏಕಾಏಕಿ ಮಂಡಿ ನೋವು ಕಾಣಿಸಿಕೊಂಡಿತ್ತು. ಸ್ಥಳೀಯರೊಬ್ಬರ ಕಾರಿನಲ್ಲಿಯೇ ಆಸ್ಪತ್ರೆಗೆ ಕರೆತರಲು ಕುಟುಂಬದವರು ಮುಂದಾದರು. ಆದರೆ ಆಸ್ಪತ್ರೆ ತಲುಪುವ ಮುನ್ನವೇ ಅವರು ಅಸುನೀಗಿದ್ದಾರೆ. ಸ್ಥಳಕ್ಕೆ ತಹಶೀಲ್ದಾ‌ರ್ ಎಸ್‌.ರಂಜಿತ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Total-Readers-of-Shivamogga-Live

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment