ಡಿವೈಎಸ್ಪಿ ಕಚೇರಿ ಮುಂಭಾಗ ದಿಢೀರ್ ಪ್ರತಿಭಟನೆ, ಮಾಜಿ ಮಿನಿಸ್ಟರ್ ನೇತೃತ್ವದಲ್ಲಿ ಇಡೀ ರಾತ್ರಿ ಹೋರಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 JANUARY 2023

THIRTHAHALLI | ಹಲ್ಲೆಗೊಳಗಾಗಿರುವ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧದ ಎಫ್ಐಆರ್ ರದ್ಧತಿಗೆ ಆಗ್ರಹಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ದಿಢೀರ್ ಪ್ರತಿಭಟನೆ (Protest) ಆರಂಭಿಸಿದ್ದಾರೆ. ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದ್ದಾರೆ.

Kimmane-Rathnakar-Protes-in-Front-of-Thirthahalli-Police-Station

ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಡಿವೈಎಸ್ಪಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನೆ (Protest) ನಡೆಸುತ್ತಿದ್ದಾರೆ.

ಹೋರಾಟಕ್ಕೆ ಕಾರಣವೇನು?

‘ಪಟ್ಟಣದ ಹೊಟೇಲ್ ಒಂದರಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಿಜೆಪಿಯ ಮೂವರು ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದವರ ಮೇಲೆ ಪ್ರಕರಣ ದಾಖಲಿಸದೆ ಹಲ್ಲೆಗೆ ಒಳಗಾದವರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಈ ಕೂಡಲೆ ಎಫ್ಐಆರ್ ರದ್ದಾಗಬೇಕು’ ಎಂದು ಕಿಮ್ಮನೆ ರತ್ನಾಕರ್ ಪಟ್ಟು ಹಿಡಿದರು.

ಇಡೀ ರಾತ್ರಿ ಪ್ರತಿಭಟನೆ

ಡಿವೈಎಸ್ಪಿ ಕಚೇರಿ ಮುಂಭಾಗ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಹೋರಾಟ ನಡೆಸಿದರು. ಪಟ್ಟಣ ಪಂಚಾಯಿತಿ ಸದಸ್ಯ ಜಯಪ್ರಕಾಶ ಶೆಟ್ಟಿ, ನಮ್ರತ್, ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ ಹುಂಚದಕಟ್ಟೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಳಕೆರೆ ಪೂರ್ಣೇಶ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಮರನಾಥ ಶೆಟ್ಟಿ, ಅಶ್ವಲ್, ಫಣಿರಾಜ್, ಸುಜಿತ್ ಸಾಲ್ಯಾನ್ ಸೇರಿದಂತೆ ಹಲವರು ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ JOB FAIR, ಇನ್ಫೋಸಿಸ್, ಬೆಂಗಳೂರು ಏರ್ ಪೋರ್ಟ್ ಸೇರಿ 40ಕ್ಕೂ ಹೆಚ್ಚು ಕಂಪನಿ ಭಾಗಿ, ನೋಂದಣಿ ಶುರು

reach%20design%20copy%20FULL%203%20MILLION

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 26, 2023

Leave a Comment