ತುಂಗೆಯಲ್ಲಿ ವೈಭವದ ತೆಪ್ಪೋತ್ಸವ, ಕಣ್ಮನ ಸೆಳೆಯಿತು ಸಿಡಿಮದ್ದು ಪ್ರದರ್ಶನ – ಇಲ್ಲಿದೆ ಫೋಟೊ ಮಾಹಿತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 JANUARY 2024

THIRTHAHALLI : ಇತಿಹಾಸ ಪ್ರಸಿದ್ಧ  ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತುಂಗಾ ನದಿಯಲ್ಲಿ ಅದ್ಧೂರಿ ತೆಪ್ಪೋತ್ಸವ ನಡೆಯಿತು. ತೀರ್ಥಹಳ್ಳಿ ಮತ್ತು ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಜನರು ತೆಪ್ಪೋತ್ಸವ ಕಣ್ತುಂಬಿಕೊಂಡರು.

ಶನಿವಾರ ರಾತ್ರಿ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ವೈಭವದ ತೆಪ್ಪೋತ್ಸವ ನಡೆಯಿತು. ರಾಮೇಶ್ವರ ದೇವರ ಉತ್ಸವ ಮೂರ್ತಿಯನ್ನು ತೆಪ್ಪದಲ್ಲಿರಿಸಿ ಉತ್ಸವ ನೆರವೇರಿಸಲಾಯಿತು. ಇದೇ ವೇಳೆ ಬಾನಂಗಳದಲ್ಲಿ ಸಿಡಿಮದ್ದುಗಳ ಚಿತ್ತಾರ ತೆಪ್ಪೋತ್ಸವ ವೈಭವ ಹೆಚ್ಚಿಸಿತು. ನೆರೆದಿದ್ದ ಸಾವಿರಾರು ಜನರು ಕ್ಯಾಮರಾ, ಮೊಬೈಲ್‌ಗಳಲ್ಲಿ ತೆಪ್ಪೋತ್ಸವ, ಸಿಡಿಮದ್ದು ಪ್ರದರ್ಶನವನ್ನು ಸೆರೆ ಹಿಡಿದರು.

ತೂಗು ಸೇತುವೆ ಮತ್ತು ಹೊಳೆ ದಂಡೆ ಮೇಲೆ ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು. ಅಯೋಧ್ಯೆ ರಾಮ ಮಂದಿರ ಮಾದರಿ ಲೈಟಿಂಗ್‌ ವ್ಯವಸ್ಥೆ ಜನರ ಗಮನ ಸೆಳೆಯಿತು. ಶಾಸಕ ಆರಗ ಜ್ಞಾನೇಂದ್ರ, ತಹಶೀಲ್ದಾರ್‌ ಜಕ್ಕನಗೌಡರ್‌, ಡಿವೈಎಸ್‌ಪಿ ಗಜಾನನ ವಾಮನಾ ಸುತಾರ್‌, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ರಮೇಶ್‌, ಜಾತ್ರಾ ಸಮಿತಿ ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ, ಧರ್ಮೇಶ್‌ ಸಿರಿಬೈಲು, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕುರಿಯಾ ಕೋಸ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ರಾಮೇಶ್ವರ ದೇವರ ವೈಭವದ ರಥೋತ್ಸವ, ಇವತ್ತು ರಾತ್ರಿ ತೆಪ್ಪೋತ್ಸವ

ದಾಖಲೆ ಪ್ರಮಾಣದಲ್ಲಿ ಜನ ಸೇರಿದ್ದರಿಂದ ತೀರ್ಥಹಳ್ಳಿ ಪೊಲೀಸರು ಬಿಗಿ ಬಂದೋಬಸ್ತ್‌ ಕೈಗೊಂಡಿದ್ದರು. ವಿವಿಧೆಡೆ ಸಿಸಿಟಿವಿ ಕ್ಯಾಮರಾ, ಡ್ರೋಣ್‌ ಮೂಲಕ ಕಣ್ಗಾವಲು ಇರಿಸಿದ್ದರು.

ಫೋಟೊ ಆಲ್ಬಂ 

ಫೋಟೊಗಳು : ಆದಿತ್ಯ ಪ್ರಸಾದ್‌, ರಾಯಲ್‌ ಕಾಫಿ, ನೆಹರು ರಸ್ತೆ, ಶಿವಮೊಗ್ಗ

Tunga River teppotsava in Thirthahalli

Tunga River teppotsava in Thirthahalli

Tunga River teppotsava in Thirthahalli

Tunga River teppotsava in Thirthahalli

Tunga River teppotsava in Thirthahalli

Tunga River teppotsava in Thirthahalli

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment