ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ತಾಲೂಕಿನ ಲಿಂಗಾಪುರ ಗ್ರಾಮದ ರೈತರೊಬ್ಬರ ಅಡಿಕೆ ತೋಟಕ್ಕೆ ನೀರು ಹಾಯಿಸಲು ಅಳವಡಿಸಿದ್ದ ವಿದ್ಯುತ್ ಮೋಟಾರ್ನ (Pump) ಕೇಬಲ್ ವೈರ್ ಕಳ್ಳತನ ಮಾಡಲಾಗಿದೆ. ಸುಮಾರು 120 ಮೀಟರ್ ಉದ್ದದ ಕೇಬಲ್ ಕಳುವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಲಿಂಗಾಪುರ ಗ್ರಾಮದ ಎನ್. ವೆಂಕಟೇಶ್ ಎಂಬುವವರು ತಮ್ಮ 10 ಎಕರೆ ಅಡಿಕೆ ತೋಟಕ್ಕೆ ನೀರು ಹಾಯಿಸಲು ಮುಡುಬ ಸ್ಮಶಾನದ ಬಳಿ ಹೊಳೆಗೆ ಮೋಟಾರ್ ಅಳವಡಿಸಿದ್ದರು. ಮೋಟಾರ್ ಆಫ್ ಮಾಡಿ ಹೋಗಿದ್ದ ಅವರು ಮರುದಿನ ಸಂಜೆ ಮೋಟಾರ್ ಆನ್ ಮಾಡಲು ಹೋದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ವಿದ್ಯುತ್ ಕಂಬದಿಂದ ಪ್ಯಾನಲ್ ಬೋರ್ಡ್ಗೆ ಸಂಪರ್ಕ ಕಲ್ಪಿಸಿದ್ದ ವೈರ್ ಕತ್ತರಿಸಲಾಗಿದೆ. ಇದರ ಮೌಲ್ಯ ಅಂದಾಜು ₹18,000 ಎಂದು ಅಂದಾಜಿಸಲಾಗಿದೆ. ಘಟನೆ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇದನ್ನೂ ಓದಿ – ಒಂದೇ ಒಂದು ಈ ಮೇಲ್ನಿಂದ ಶಿವಮೊಗ್ಗದ ಕಾರ್ಖಾನೆಗೆ ₹8,89,950 ನಷ್ಟ, ಆಗಿದ್ದೇನು?

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















