ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಮನೆಯವರು ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ ಹೋದ ಸಂದರ್ಭ ಮನೆಯ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ (gold) ದೋಚಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ತೆಂಗಿನಕೊಪ್ಪ ಗ್ರಾಮದ ಸಂಪಿಗೆಸರದಲ್ಲಿ ನಡೆದಿದೆ.
ಪಾಂಡೇಶ್ ಅವರು ಗುರುವಾರ ಮಧ್ಯಾಹ್ನ 12.30ಕ್ಕೆ ಮನೆಯ ಬಾಗಿಲಿಗೆ ಬೀಗ ಹಾಕಿಕೊಂಡು ಕುಟುಂಬ ಸಹಿತ ಸಂಪಿಗೆಸರದಲ್ಲಿರುವ ಸಂಬಂಧಿಯೊಬ್ಬರ ಮನೆಯ ಕಾರ್ಯಕ್ರಮಕ್ಕೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 3.30ಕ್ಕೆ ಮನೆಗೆ ಹಿಂತಿರುಗಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಬಾಗಿಲಿಗೆ ಹಾಕಿದ್ದ ಬೀಗವನ್ನು ಕಳ್ಳರು ಮುರಿದು. ಬೆಡ್ ರೂಮಿನಲ್ಲಿದ್ದ ಬೀರುವನ್ನು ತೆರೆದು ಲಾಕರ್ನಲ್ಲಿದ್ದ ಆಭರಣ ಕಳವು ಮಾಡಲಾಗಿದೆ. ₹1.35 ಲಕ್ಷ ಮೌಲ್ಯದ 10 ಗ್ರಾಂ ಚಿನ್ನದ ಕರಿಮಣಿ ಸರ, ₹1.08 ಲಕ್ಷ ಮೌಲ್ಯದ 8 ಗ್ರಾಂ ಚಿನ್ನದ ಸರ, ₹2.16 ಲಕ್ಷ ಮೌಲ್ಯದ 16 ಗ್ರಾಂ ತೂಕದ ಮತ್ತೊಂದು ಚಿನ್ನದ ಸರ, ತಲಾ 10 ಗ್ರಾಂ ತೂಕದ ಎರಡು ಜೋಡಿ ಕಿವಿ ಓಲೆಗಳು ಹಾಗೂ ₹54,000 ಮೌಲ್ಯದ ಒಂದು ಮುತ್ತಿನ ಸರ ಸೇರಿವೆ. ಒಟ್ಟು 58 ಗ್ರಾಂ ತೂಕದ ಸುಮಾರು ₹7,83,000 ಮೌಲ್ಯದ ಆಭರಣಗಳನ್ನು ಕಳ್ಳರು ದೋಚಿದ್ದಾರೆ ಎಂದು ಅಂದಾಜಿಸಲಾಗಿದೆ.
ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೆ ಪತ್ನಿಯೂ ನೇಣಿಗೆ ಶರಣು, ಘಟನೆಗೆ ಪೊಲೀಸ್ ಸಿಬ್ಬಂದಿ ಕಾರಣವಾ?
LATEST NEWS
- ಶಿವಮೊಗ್ಗದಲ್ಲಿ ಪ್ರಧಾನಿ ವಿರುದ್ಧ ಆಕ್ರೋಶ, ಮೋದಿ ರಾಜೀನಾಮೆಗೆ ಆಗ್ರಹ, ಕಾರಣವೇನು?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ವಾಹನಗಳ ಸಂಚಾರ ಮಾರ್ಗ ಬದಲಾವಣೆ, ಯಾವ್ಯಾವ ರಸ್ತೆ?

- ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ, ರಾಹುಲ್ ಗಾಂಧಿ ಪ್ರತಿಕೃತಿಗೆ ಬೆಂಕಿ

- ಕಾರ್ಯಕ್ರಮ ಮುಗಿಸಿ ಕುಟುಂಬದವರು ಮನೆಗೆ ಬಂದಾಗ ಬಾಗಿಲು ತೆರೆದಿತ್ತು, ತೀರ್ಥಹಳ್ಳಿಯಲ್ಲಿ ಕೇಸ್

- ಶಿವಮೊಗ್ಗದಲ್ಲಿ ಸೆಕೆ ಶುರು, ತಾಪಮಾನ ಹೆಚ್ಚಳ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ಉಷ್ಣಾಂಶ?

About The Editor
ನಿತಿನ್ ಆರ್.ಕೈದೊಟ್ಲು





