ತೀರ್ಥಹಳ್ಳಿಯಲ್ಲಿ ಆಷಾಢ ಮಾಸದ ‘ಆಟಿಡು ಒಂಜಿ’ ದಿನ, ಏನಿದರ ವಿಶೇಷ? ಹೇಗಿತ್ತು ಗೊತ್ತಾ ಕಾರ್ಯಕ್ರಮ?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 2 ಆಗಸ್ಟ್ 2019

ಬಂಟರ ಸಂಘದ ಮಹಿಳಾ ವಿಭಾಗದ ವತಿಯಿಂದ ತೀರ್ಥಹಳ್ಳಿಯಲ್ಲಿ ಆಷಾಢ ಮಾಸದ ಆಟಿಡು ಒಂಜಿ ದಿನ ಆಯೋಜಿಸಲಾಯಿತು. ಇದರ ಅಂಗವಾಗಿ, ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಒಟ್ಟಿಗೆ ಸವಿದು ಮಹಿಳೆಯರು ಸಂಭ್ರಮಿಸಿದರು.

ಪಟ್ಟಣದ ಬಂಟರ ಭವನದಲ್ಲಿ ಕಾರ್ಯಕ್ರಮ ಉದ್ಘಾಟಿಸಿದ ಬಂಟರ ಮಹಿಳಾ ವಿಭಾಗದ ಅಧ್ಯಕ್ಷೆ ಶಶಿಕಲಾ ಎಂ ಶೆಟ್ಟಿ, ನಮ್ಮ ಸಂಸ್ಕೃತಿಯಲ್ಲಿ ಆಷಾಢ ಮಾಸಕ್ಕೆ ವಿಶೇಷವಾದ ಮಹತ್ವವಿದೆ. ಧಾರ್ಮಿಕ, ಜಾನಪದ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಈ ಮಾಸದಲ್ಲಿ ನಡೆಯಲಿದ್ದು, ಆದರೆ ನಾವುಗಳಿಂದು ಆಟಿಡು ಒಂಜಿ ದಿನದ ಪದ್ಧತಿಯನ್ನು ಮರೆಯುತ್ತಿದ್ದೇವೆ ಎಂದರು.

ತಾಲ್ಲೂಕು ಬಂಟರ ಸಮಾಜದ ಅಧ್ಯಕ್ಷ ಬಿ.ಎಲ್. ಪ್ರಭಾಕರ್ ಹೆಗ್ಡೆ, ಮಹಿಳಾ ವಿಭಾಗದ ಉಪಾಧ್ಯಕ್ಷೆ ಸುಜಯ ಕೆ ಶೆಟ್ಟಿ, ಕಾರ್ಯದರ್ಶಿ ಚಂದ್ರಿಕಾ ಎಂ ಶೆಟ್ಟಿ, ಖಜಾಂಚಿ ನಯನ ಜಯಪ್ರಕಾಶ್ ಶೆಟ್ಟಿ, ಸದಸ್ಯರಾದ ಪ್ರೇಮಾ ಆರ್ ಶೆಟ್ಟಿ, ಜ್ಯೋತಿ ದಿಲೀಪ್, ಸಂಘದ ನಿರ್ದೇಶಕರಾದ ಚಂದ್ರವತಿ ಶೆಟ್ಟಿ, ಗೀತಾ ಸದಾನಂದ ಶೆಟ್ಟಿ ಹಾಗೂ ತಾಲ್ಲೂಕು ಬಂಟರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment