ತೀರ್ಥಹಳ್ಳಿಯಲ್ಲಿ ಅದ್ಧೂರಿಯಾಗಿತ್ತು ಎಳ್ಳಮಾವಾಸ್ಯೆ ರಥೋತ್ಸವ, ಇವತ್ತು ತೆಪ್ಪೋತ್ಸವ, ಹೇಗಿತ್ತು ರಥೋತ್ಸವದ ವೈಭವ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021

ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ವಿಜೃಂಭಣೆಯಿಂದ ನೆರವೇರಿತು. ಸಹಸ್ರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.

ಎಳ್ಳಮಾವಾಸ್ಯೆ ರಥೋತ್ಸವ ಮತ್ತು ಸಂಕ್ರಾಂತಿ ಹಬ್ಬ ಒಂದೇ ದಿನ ಬಂದಿದ್ದರಿಂದ, ಎರಡು ರಥೋತ್ಸವವನ್ನು ಒಟ್ಟಿಗೆ ನಡೆಸಲಾಯಿತು. ರಥೋತ್ಸವದ ವೇಳೆ ಅಡಕೆ ಹೊಸ ಫಸಲನ್ನು ರಥದತ್ತ ತೂರಿದರು. ರಥಕ್ಕೆ ತಾಗಿ ಕೆಳಗೆ ಬೀಳುತ್ತಿದ್ದ ಅಡಕೆ ಫಸಲನ್ನು ಪ್ರಸಾದದ ರೂಪದಲ್ಲಿ ಸ್ವೀಕರಿಸಿದರು.

ರಥೋತ್ಸವಕ್ಕೂ ಮೊದಲು ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಭಾರೀ ಸಂಖ್ಯೆಯ ಭಕ್ತರು ಸೇರಿದ್ದರು. ಈ ವೇಳೆ ಅಧಿವಾಸ ಹೋಮ, ಕಲಶಾಭಿಷೇಕ, ಮಹಾ ಪೂಜೆ ನೆರವೇರಿಸಲಾಯಿತು.

ಇವತ್ತು ತೆಪ್ಪೋತ್ಸವ

ಎಳ್ಳಮಾವಸ್ಯೆ ಜಾತ್ರೆ ಹಿನ್ನೆಲೆ ಇವತ್ತು ಬೆಳಗ್ಗೆಯಿಂದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ. ರಾತ್ರಿ 7ಕ್ಕೆ ಸಾರ್ವಜನಿಕ ತೆಪ್ಪೋತ್ಸವ, ಸಂದಾನ, ಪೂರ್ಣಾಹುತಿ, ಧ್ವಜಾರೋಹಣ, ಪ್ರಸಾದ ವಿತರಣೆ ನಡೆಯಲಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment