ಕಿಮ್ಮನೆ ರತ್ನಾಕರ್ ಶಾಸಕರಾಗಿದ್ದಾಗ ತೀರ್ಥಹಳ್ಳಿಯಲ್ಲಿ ಜಾಗ ಗುರುತು, ಇನ್ನೂ ಶುರುವಾಗದ ಕ್ಯಾಂಟೀನ್, ಆಕ್ರೋಶ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 23 MAY 2021

ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ತೀರ್ಥಹಳ್ಳಿ ಗ್ರಾಮಾಂತರ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುಡುಬ ರಾಘವೇಂದ್ರ ಆಗ್ರಹಿಸಿದ್ದಾರೆ.

ಲಾಕ್ ಡೌನ್‍ನಿಂದಾಗಿ ಕೂಲಿ ಕಾರ್ಮಿಕರು ಸೇರಿ ಶ್ರಮಿಕ ವರ್ಗದವರು ದುಡಿಮೆ ಇಲ್ಲದೆ ಹೊತ್ತಿನ ಊಟ, ತಿಂಡಿಗೂ ಪರಿತಪಿಸುವಂತಾಗಿದೆ. ಈ ವರ್ಗದವರ ಹಸಿವು ನೀಗಿಸಲು ಕೂಡಲೆ ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ಮುಡುಬ ರಾಘವೇಂದ್ರ ಒತ್ತಾಯಿಸಿದ್ದಾರೆ.

ಕಿಮ್ಮನೆ ಅವಧಿಯಲ್ಲಿ ಸ್ಥಳ ನಿಗದಿಯಾಗಿತ್ತು

ಕಿಮ್ಮನೆ ರತ್ನಾಕರ್ ಅವರು ಶಾಸಕರಾಗಿದ್ದಾಗ ಇಂದಿರಾ ಕ್ಯಾಂಟೀನ್‍ಗೆ ಜಾಗವನ್ನು ಗುರುತಿಸಲಾಗಿತ್ತು. ಆದರೆ ಅವರು ಅಧಿಕಾರದಿಂದ ಇಳಿಯುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಮರೆಗೆ ಸರಿದಿದೆ. ಲಾಕ್‍ ಡೌನ್ ಅವಧಿ ವಿಸ್ತರಣೆಯಾಗುತ್ತಿರುವುದರಿಂದ ದಿನ ದುಡಿದು ತಿನ್ನುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನಾದರೂ ಇಂದಿರಾ ಕ್ಯಾಂಟೀನ್‍ ಆರಂಭದತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

  • ದೇಶದ ಅತಿ ದೊಡ್ಡ ಕೊಡುಗೆ

# Nation’s Biggest Offer Starts Midnight at shop.bigbazaar.com. Shop for ₹1500 & get ₹1000 Cashback! Be the first to shop! https://bit.ly/3v6Fu44

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment