ಚುನಾವಣೆ ಹೊಸ್ತಿಲಲ್ಲಿ ಶಿವಮೊಗ್ಗ ಜೆಡಿಎಸ್’ಗೆ ಶಾಕ್, ತೀರ್ಥಹಳ್ಳಿಯಲ್ಲಿ ಭುಗಿಲೆದ್ದ ಭಿನ್ನಮತ, ರಾಜೀನಾಮೆ

ಶಿವಮೊಗ್ಗ ಲೈವ್.ಕಾಂ | 02 ಏಪ್ರಿಲ್ 2019

Shivamogga-Live-Number-1-Website

ಚುನಾವಣೆ ಹೊಸ್ತಿಲಲ್ಲೇ ಶಿವಮೊಗ್ಗ ಜೆಡಿಎಸ್’ಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ. ತೀರ್ಥಹಳ್ಳಿ ಜೆಡಿಎಸ್’ನಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ತಾಲೂಕು ಅಧ್ಯಕ್ಷರೇ ರಾಜೀನಾಮೆ ನೀಡಿದ್ದಾರೆ. ಅಲ್ಲದೆ, ಚುನಾವಣೆಯಲ್ಲಿ ಮಧು ಬಂಗಾರಪ್ಪ ಪರ ಪ್ರಚಾರ ನಡೆಸದೆ ತಟಸ್ಥವಾಗಿ ಉಳಿಯುವುದಾಗಿ ತಿಳಿಸಿದ್ದಾರೆ.

55443496 817465418614880 1941376186168901632 n.jpg? nc cat=108& nc oc=AQm5PExMJ7qy5RC qq3hl3If12D35aMNLwPijJCuuM2Doy9Ds2gW6QHG Vdylvbogn8& nc ht=scontent.fblr10 1

ಈ ಕುರಿತು ಸುದ್ದಿಗೋಷ್ಠಿಯ ಮಾತನಾಡಿದ ತೀರ್ಥಹಳ್ಳಿ ಜೆಡಿಎಸ್ ಅಧ್ಯಕ್ಷ ಮದನ್, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು. ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರ ಸರ್ವಾಧಿಕಾರಿ ಧೋರಣೆಯಿಂದ ಬೇಸತ್ತು ರಾಜೀನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ ಮದನ್, ಲೋಕಸಭೆ ಚುನಾವಣೆ ಬಳಿಕ ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು. ಇನ್ನು, ಮದನ್ ಅವರೊಂದಿಗೆ ಅವರ ಬೆಂಬಲಿಗರು ಕೂಡ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಎಂದೂ ಕಡೆಗಣಿಸಿಲ್ಲ, ಅವರಿಗೆ ಒಳ್ಳೆಯದಾಗಲಿ

ನಂತರ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ, ಪಕ್ಷದಲ್ಲಿ ಮದನ್ ಅವರನ್ನು ಎಂದೂ ಕಡೆಗಣಿಸಿಲ್ಲ. ನಮ್ಮಿಬ್ಬರ ನಡುವೆ ಯಾವುದೇ ಜಗಳವಾಗಿಲ್ಲ. ಸಣ್ಣಪುಟ್ಟ ಗೊಂದಲಗಳಿದ್ದರೆ ಬಗೆಹರಿಸಿಕೊಳ್ಳುತ್ತೇವೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರಬಹುದು, ಮಧು ಬಂಗಾರಪ್ಪ ವಿರುದ್ಧ ಪ್ರಚಾರ ನಡೆಸುವುದಿಲ್ಲ ಅಂತಾ ಮದನ್ ಹೇಳಿದ್ದಾರಲ್ಲ. ಅವರಿಗೆ ಒಳ್ಳೆಯದಾಗಲಿ ಎಂದರು.

56652770 817465398614882 3060661620037386240 n.jpg? nc cat=107& nc oc=AQmwdS8lncRb8 OOiJnNK2aaagbnIHybvbzVc7vUZ RxWtvC0p8ZxGn4rfIwS6t tAk& nc ht=scontent.fblr10 1

ಮೂರು ದಿನದ ಹಿಂದಷ್ಟೇ ಸಚಿವ ಡಿ.ಕೆ.ಶಿವಕುಮಾರ್ ಅವರು ತೀರ್ಥಹಳ್ಳಿಗೆ ಭೇಟಿ ನೀಡಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದರು. ಅಲ್ಲದೇ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಅವರನ್ನು ಒಂದೇ ವೇದಿಕೆಯಲ್ಲಿ ಕೂರಿಸಿ, ಒಗ್ಗಟ್ಟು ಪ್ರದರ್ಶಿಸಿದ್ದರು. ಆದರೆ ಈಗ ತಾಲೂಕು ಜೆಡಿಎಸ್’ನಲ್ಲೇ ಭಿನ್ನಮತ ಸ್ಫೋಟಗೊಂಡಿರುವುದು, ಕಾರ್ಯಕರ್ತರಲ್ಲಿ ಗೊಂದಲವನ್ನುಂಟು ಮಾಡಿದೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 2, 2019

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಗುದ್ದಿ ಪಲ್ಟಿಯಾದ ಖಾಸಗಿ ಬಸ್

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ತಾಳಗುಪ್ಪ ಇಂಟರ್‌ಸಿಟಿ ರೈಲು, ಬೆಂಗಳೂರು ಮಹಿಳೆಯ ದೂರು, ದಾವಣಗೆರೆಯ ವ್ಯಕ್ತಿ ಅರೆಸ್ಟ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಶಿವಮೊಗ್ಗದಲ್ಲಿ ರಸ್ತೆ ಬದಿಯ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಮೈತ್ರಾದೇವಿ ಯಡಿಯೂರಪ್ಪ ಸ್ಮರಣಾರ್ಥ ಚಿನ್ನದ ಪದಕ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

ಶಿವಮೊಗ್ಗ, ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

Hulikal Ghat Closed for Traffic Following Landslide; Alternate Routes Announced

Hulikal Ghat Closed for Traffic Following Landslide; Alternate Routes Announced

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

ಹುಲಿಕಲ್ ಘಾಟಿ: ಎಲ್ಲಾ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

Leave a Comment