ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 06 JANUARY 2021
ತೀರ್ಥಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಿಗೆ ಸಾರಿಗೆ ಬಸ್ ಸಂಚಾರ ಆರಂಭವಾಗದೆ ಇರುವುದರಿಂದ ವಿದ್ಯಾರ್ಥಿಗಳು ಶಾಲೆ ಬರಲು ಸಮಸ್ಯೆ ಆಗುತ್ತಿದೆ. ಕೂಡಲೆ ಬಸ್ ಸಂಚಾರ ಪುನಾರಂಭ ಮಾಡಬೇಕು ಅಂತಾ ತೀರ್ಥಹಳ್ಳಿ ಜೆಡಿಎಸ್ ಘಟಕದ ವತಿಯಿಂದ ಒತ್ತಾಯಿಸಲಾಗಿದೆ.
ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಸಾರಿಗೆ ಸೌಕರ್ಯವಿಲ್ಲದೆ ಇರುವುದರಿಂದ ವಿದ್ಯಾರ್ಥಿಗಳ ಹಾಜರಾತಿ ಗಣನೀಯ ಕುಸಿದಿದೆ ಎಂದು ಆರೋಪಿಸಿದರು.
ತಾಲೂಕಿನ ಹೆದ್ದೂರು, ಕಟ್ಟೆಹಕ್ಕಲು, ಕೋಣಂದೂರು, ಮೃಗವಧೆ, ಹಾರೋಗೊಳಿಗೆ, ಹರಳಿಮಠ, ಮುನ್ನೂರು, ಕಮಕಾರು, ಸಿಂಗನಬಿದರೆ ಸೇರಿದಂತೆ ಹಲವು ಕಡೆಗೆ ಬಸ್ ವ್ಯವಸ್ಥೆ ಇಲ್ಲ. ಇದು ವಿದ್ಯಾರ್ಥಿಗಳಿಗೆ ತೀವ್ರ ಸಂಕಷ್ಟವನ್ನು ಉಂಟು ಮಾಡುತ್ತಿದೆ. ಕೋವಿಡ್ ಸಂದರ್ಭದಲ್ಲಿ ನಿಲ್ಲಿಸಿದ್ದ ಬಸ್ಸುಗಳನ್ನು ನಿಲ್ಲಿಸಲಾಗಿದೆ. ಕೂಡಲೆ ಬಸ್ ಸಂಚಾರ ಆರಂಭಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಟಿ.ಎಲ್.ಸುಂದರೇಶ್, ಪ್ರಮುಖರಾದ ಕಿರಣ್ ಕಟ್ಟೆಹಕ್ಲು, ನಾಗರಾಜ್ ಪೂಜಾರಿ ಕುರುವಳ್ಳಿ, ಜೀನಾ ವಿಕ್ಟರ್ ಡಿಸೋಜಾ, ಅಶ್ವಲ್ ಗೌಡ, ಶಫಿ ಇಂದಿರಾನಗರ, ನವೀನ್ ಸಿಂಗನಬಿದರೆ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






