| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಮೇ 2020
ತಲೆಮರೆಸಿಕೊಂಡಿರುವ ತೀರ್ಥಹಳ್ಳಿಯ ಯುವಕನೊಬ್ಬನ ಕುರಿತು ಸುಳಿವು ನೀಡಿದರೆ ಮೂರು ಲಕ್ಷ ರುಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಘೋಷಿಸಿದೆ. ಈ ಕುರಿತು ಎನ್ಐಎ ಪ್ರಕಟಣೆಯನ್ನು ಹೊರಡಿಸಿದೆ.
ಯಾರು ಆ ಯುವಕ? ಎಲ್ಲಿಯವನು?
ಅಬ್ದುಲ್ ಮತೀನ್ ಅಹ್ಮದ್ ತಾಹಾ (26), ಈತನ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಲು ನಿರ್ಧರಿಸಲಾಗಿದೆ. ಅಬ್ದುಲ್ ಮತೀನ್ ತಾಹಾ ತೀರ್ಥಹಳ್ಳಿ ತಾಲೂಕು ಸೊಪ್ಪುಗುಡ್ಡೆ ಗ್ರಾಮದ ಮೀನು ಮಾರ್ಕೆಟ್ ರಸ್ತೆಯ ನಿವಾಸಿ. ಕೆಲವು ತಿಂಗಳಿಂದ ಈತ ತಲೆಮರೆಸಿಕೊಂಡಿದ್ದಾನೆ.
ತಲೆ ಮರೆಸಿಕೊಂಡಿದ್ದೇಕೆ? ಬಹುಮಾನವೇಕೆ?
ಅಬ್ದುಲ್ ಮತೀನ್ ಉಗ್ರಗಾಮಿ ಚಟುವಟಿಕೆಯಲ್ಲಿ ತೊಡಗಿದ್ದಾನೆ ಎಂಬ ಆರೋಪವಿದೆ. ಈತನ ವಿರುದ್ಧ 2020ರ ಜನವರಿಯಲ್ಲಿ ಬೆಂಗಳೂರಿನ ಸದ್ದುಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೆಂಗಳೂರಿನ ಗುರಪ್ಪನಪಾಳ್ಯದ ಮೆನಯೊಂದರಲ್ಲಿ ಐಎಸ್ಐಎಸ್ ಉಗ್ರಗಾಮಿ ಸಂಘಟನೆಯ ಸಭೆಗಳಲ್ಲಿ ಅಬ್ದುಲ್ ಮತೀನ್ ಪಾಲ್ಗೊಂಡಿದ್ದ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಉಗ್ರ ಚಟುವಟಿಕೆ ನಡೆಸುವುದು, ಸಿರಿಯಾ ಮತ್ತು ಅಫಘನಿಸ್ಥಾನ ದೇಶಗಳಿಗೆ ತೆರಳಿ ಐಎಸ್ಐಎಸ್ ಜೊತೆ ಸೇರುವ ಕುರಿತು ಈ ಸಭೆಗಳಲ್ಲಿ ಚರ್ಚೆ ನಡೆಸಿದ್ದರು. ಇನ್ನು, ತಮಿಳುನಾಡಿನಲ್ಲಿ ಹಿಂದೂ ಸಂಘಟನೆ ಮುಖಂಡರೊಬ್ಬರ ಹತ್ಯೆ ಪ್ರಕರಣದಲ್ಲೂ ಭಾಗಿಯಾದ ಆರೋಪವಿದೆ. ಇವೆರಡು ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದೆ ಎಂದು ಎನ್ಐಎ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆದರೆ ಅಬ್ದುಲ್ ಮತೀನ್ ತಲೆಮರೆಸಿಕೊಂಡಿದ್ದಾನೆ. ಇದೇ ಕಾರಣಕ್ಕೆ, ಈತನ ಕುರಿತು ಸುಳಿವು ನೀಡಿದವರಿಗೆ ಮೂರು ಲಕ್ಷ ರೂ ಬಹುಮಾನ ನೀಡುವುದಾಗಿ ಎನ್ಐಎ ತಿಳಿಸಿದೆ.
ತೀರ್ಥಹಳ್ಳಿಗೆ ಬಂದಿತ್ತು ತನಿಖಾ ತಂಡ
ಅಬ್ದುಲ್ ಮತೀನ್ ಪತ್ತೆ ಹೆಚ್ಚುವ ಸಲುವಾಗಿ ಜನವರಿ ತಿಂಗಳಲ್ಲಿ ಕೇಂದ್ರ ತನಿಖಾ ತಂಡ ಮತ್ತು ಬೆಂಗಳೂರು ಪೊಲೀಸರ ತಂಡವೊಂದು ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆ ಗ್ರಾಮಕ್ಕೆ ಆಗಮಿಸಿತ್ತು. ಇದು ತಾಲೂಕಿನಾದ್ಯಂತ ಆತಂಕ ಮೂಡಿಸಿತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಡಾ.ಜಯಶ್ರೀ, ಪುತ್ರ ಆಕಾಶ್ ಆತ್ಮಹತ್ಯೆ ಕೇಸ್, ಗೊತ್ತಾಗಿದ್ದು ಹೇಗೆ? ‘ಸಾನಿಧ್ಯ’ ಮನೆ ಬಗ್ಗೆ ಜನ ಹೇಳಿದ್ದೇನು?
- ಕೋಟೆ ದೇವಸ್ಥಾನದಲ್ಲಿ 30 ದಿನ ಸೀತಾಕಲ್ಯಾಣ ಶತಮಾನೋತ್ಸವ, ಏನೇನೆಲ್ಲ ಕಾರ್ಯಕ್ರಮ ಇರಲಿದೆ?
- BREAKING NEWS – ಶಿವಮೊಗ್ಗದ ಖ್ಯಾತ ಡಾಕ್ಟರ್ ಮತ್ತು ಪುತ್ರ ನೇಣಿಗೆ ಶರಣು
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
![]()