ಕ್ಷೇತ್ರ ಪರಿಚಯ | ತೀರ್ಥಹಳ್ಳಿ – ಅಡಕೆಯೆ ಪ್ರಧಾನ ವಿಚಾರ, ಈವರೆಗೂ ಹೇಗಿತ್ತು, ಈಗ ಹೇಗಿದೆ ಅಖಾಡ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 DECEMBER 2022

ತೀರ್ಥಹಳ್ಳಿ : ತುಂಗಾ ನದಿ ದಂಡೆ ಮೇಲಿರುವ ತೀರ್ಥಹಳ್ಳಿ ಪ್ರಜ್ಞಾವಂತರ ಕ್ಷೇತ್ರ. ರಾಜಕೀಯವಾಗಿ ಹಲವು ಪಕ್ಷಗಳಿಗೆ ಮತ್ತು ನಾಯಕರಿಗೆ ಕ್ಷೇತ್ರದ ಜನ ಅವಕಾಶ ಕಲ್ಪಿಸಿದ್ದಾರೆ. ಇಲ್ಲಿ ಗೆದ್ದವರು ಮುಖ್ಯಮಂತ್ರಿಯಾಗಿದ್ದಾರೆ. ಸಚಿವ ಸಂಪುಟದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಪ್ರಸ್ತುತ ಆರಗ ಜ್ಞಾನೇಂದ್ರ ಅವರು ಗೃಹ ಸಚಿವರಾಗಿದ್ದಾರೆ. ಈ ಹಿಂದೆ ಕಿಮ್ಮನೆ ರತ್ನಾಕರ್ ಅವರು ಶಿಕ್ಷಣ ಸಚಿವರಾಗಿದ್ದರು. (Tirthahalli Assembly constituency)

Shimoga Nanjappa Hospital

1957ರ ಬಳಿಕ ತೀರ್ಥಹಳ್ಳಿ ಕ್ಷೇತ್ರ 14 ವಿಧಾನಸಭೆ ಚುನಾವಣೆಗಳನ್ನು ಕಂಡಿದೆ. ಸಮಾಜವಾದಿ ಪಕ್ಷಗಳು, ಜನತಾ ಪಕ್ಷ, ಕಾಂಗ್ರೆಸ್ ಪಕ್ಷಗಳ ಅಖಾಡವಾಗಿದ್ದ ತೀರ್ಥಹಳ್ಳಿಯಲ್ಲಿ ಆರಗ ಜ್ಞಾನೇಂದ್ರ ಅವರು ಬಿಜೆಪಿ ಶಕೆ ಆರಂಭಿಸಿದ್ದಾರೆ.

Tirthahalli Assembly constituency

ಸಿಎಂ ಸ್ಥಾನ ಕಂಡಿದ್ದ ಕ್ಷೇತ್ರ

ಮೈಸೂರು ಸಂಸ್ಥಾನದಲ್ಲಿ ತೀರ್ಥಹಳ್ಳಿ ಕ್ಷೇತ್ರ ಮುಖ್ಯಮಂತ್ರಿ ಹುದ್ದೆಯನ್ನು ಸಮೀಪದಿಂದ ಕಂಡಿತ್ತು. ತೀರ್ಥಹಳ್ಳಿ ಕ್ಷೇತ್ರವನ್ನ ಪ್ರತಿನಿಧಿಸಿದ್ದ ಕಡಿದಾಳು ಮಂಜಪ್ಪ ಅವರು 1956ರ ಆಗಸ್ಟ್ 19ರಂದು ಮುಖ್ಯಮಂತ್ರಿಯಾದರು. 73 ದಿನ ಸಿಎಂ ಆಗಿ ಅಧಿಕಾರ ನಡೆಸಿದ್ದರು.

Tirthahalli Assembly constituency

ಈವರೆಗು ಯಾರೆಲ್ಲ ಗೆದ್ದಿದ್ದಾರೆ?

1957ರ ಮೊದಲ ಚುನಾವಣೆಯಲ್ಲಿ ಎ.ಆರ್.ಭದ್ರಿ ನಾರಾಯಣ (ಕಾಂಗ್ರೆಸ್), 1962 ಮತ್ತು 1967 ಶಾಂತವೇರಿ ಗೋಪಾಲಗೌಡ (ಸೋಷಿಯಲಿಸ್ಟ್ ಪಕ್ಷ), 1972ರಲ್ಲಿ ಕೋಣಂದೂರು ಲಿಂಗಪ್ಪ (ಸಂಯುಕ್ತ ಸೋಷಿಯಲಿಸ್ಟ್ ಪಾರ್ಟಿ), 1978ರಲ್ಲಿ ಕಡಿದಾಳು ದಿವಾಕರ (ಕಾಂಗ್ರೆಸ್), 1983ರಲ್ಲಿ ಡಿ.ಬಿ.ಚಂದ್ರೆಗೌಡ (ಜನತಾ ಪಕ್ಷ), 1985ರಲ್ಲಿ ಪಟ್ಮಕ್ಕಿ ರತ್ನಾಕರ (ಕಾಂಗ್ರೆಸ್), 1989ರಲ್ಲಿ ಡಿ.ಬಿ.ಚಂದ್ರೆಗೌಡ (ಜನತಾ ದಳ) ಆಯ್ಕೆಯಾಗಿದ್ದರು.

Araga Jnanendra Home Minister

1994, 1999 ಮತ್ತು 2004ರಲ್ಲಿ ಆರಗ ಜ್ಞಾನೇಂದ್ರ (ಬಿಜೆಪಿ), 2008 ಮತ್ತು 2013ರಲ್ಲಿ ಕಿಮ್ಮನೆ ರತ್ನಾಕರ್ (ಕಾಂಗ್ರೆಸ್), 2018ರಲ್ಲಿ ಆರಗ ಜ್ಞಾನೇಂದ್ರ (ಬಿಜೆಪಿ) ಆಯ್ಕೆಯಾಗಿದ್ದಾರೆ.

2018ರ ಚುನಾವಣೆ ಫಲಿತಾಂಶ

[su_table responsive=”yes” fixed=”yes”]

ಅಭ್ಯರ್ಥಿಪಡೆದ ಮತ
ಆರಗ ಜ್ಞಾನೇಂದ್ರ67,527
ಕಿಮ್ಮನೆ ರತ್ನಾಕರ್45,572
ಅಂತರ21,955

[/su_table]

2018 ಮತದಾರರ ವಿವರ

[su_table responsive=”yes” fixed=”yes”]

ಒಟ್ಟು ಮತದಾರರು1,84,189
ಚಲಾವಣೆಯಾದ ಮತ1,55,725
ಶೇಕಡವಾರು ಮತದಾನ85.26

[/su_table]

ಜಾತಿವಾರು ಬಲಾಬಲ

ತೀರ್ಥಹಳ್ಳಿ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯದ ಮತದಾರರು ಹೆಚ್ಚು. ಈಡಿಗ, ಬ್ರಾಹ್ಮಣ, ಲಿಂಗಾಯತ ಮತ್ತು ಮುಸ್ಲಿಂ ಮತದಾರರು ನಿರ್ಣಾಯಕರಾಗಲಿದ್ದಾರೆ. ಪರಿಶಿಷ್ಟ ಜಾತಿಯ ಮತಗಳು ಗಣನೀಯ ಸಂಖ್ಯೆಯಲ್ಲಿದೆ.

Tirthahalli Assembly constituency

ಈಗ ಹೇಗಿದೆ ಅಖಾಡ?

ಗೃಹ ಸಚಿವರಾಗಿರುವ ಆರಗ ಜ್ಞಾನೇಂದ್ರ ಅವರು ಪುನಃ ಸ್ಪರ್ಧೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈಚೆಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆರಗ ಜ್ಞಾನೇಂದ್ರ ಅವರೆ ಬಿಜೆಪಿ ಅಭ್ಯರ್ಥಿ ಎಂದು ಸೂಚ್ಯವಾಗಿ ಹೇಳಿದ್ದರು.

Kimmane Rathnakar Congress

ಇತ್ತ ಕಾಂಗ್ರೆಸ್ ಪಕ್ಷದಲ್ಲಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಯಾರಿಗೆ ಟಿಕೆಟ್ ಸಿಕ್ಕರು ಒಗ್ಗಟ್ಟಿನಿಂದ ಮುಂದಡಿ ಇಟ್ಟರೆ ಪಕ್ಷಕ್ಕೆ ಅನುಕೂಲ ಎಂಬ ಚರ್ಚೆ ಇದೆ. ಇನ್ನು, ಜೆಡಿಎಸ್ ಪಕ್ಷದಲ್ಲಿ ರಾಜಾರಾಮ್ ಯಡೂರು ಅವರನ್ನು ಅಭ್ಯರ್ಥಿ ಎಂದು ಘೋಷಿಸಲಾಗಿದೆ.

ಇದನ್ನೂ ಓದಿ – ಕ್ಷೇತ್ರ ಪರಿಚಯ | ಭದ್ರಾವತಿ – ಯಾರೆ ಗೆದ್ದರು ಇಲ್ಲಿ ಜನರ ಬೇಡಿಕೆ ಒಂದೇ

ಎಲೆ ಚುಕ್ಕೆ ರೋಗ, ಅಡಕೆ ಬೆಳೆ, ಬೆಳೆಗಾರರಿಗೆ ಸಂಬಂಧಿಸಿದ ವಿಷಯಗಳು, ಶರಾವತಿ ಸಂತ್ರಸ್ತರ ಸಂಕಷ್ಟ, ಅಭಿವೃದ್ಧಿ ಕಾರ್ಯಗಳು ಈ ಬಾರಿ ಚುನಾವಣೆ ವಿಷಯವಾಗುವ ಸಾದ್ಯತೆ ಇದೆ.

[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – SHIVAMOGGA LIVE COMMUNITY[/su_button][/su_animate]

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 9, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment