SHIVAMOGGA LIVE NEWS | 7 JULY 2024
THIRTHAHALLI : ಭಾರಿ ಮಳೆಗೆ ಹೆದ್ದಾರಿಗೆ (Highway) ಅಡ್ಡಲಾಗಿ ಮರ ಧರೆಗುರುಳಿ ವಾಹನ ಸಂಚಾರ ಸ್ಥಗಿತಗೊಂಡಿದೆ. ತೀರ್ಥಹಳ್ಳಿ ತಾಲೂಕು ಗಬಡಿ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ 169ಎ ನಲ್ಲಿ ಬೃಹತ್ ಮರ ಬುಡಮೇಲಾಗಿ ಬಿದ್ದಿದೆ. ಇದರಿಂದ ಶಿವಮೊಗ್ಗ – ತೀರ್ಥಹಳ್ಳಿ ಮಧ್ಯೆ ವಾಹನ ಸಂಚಾರ ಸ್ಥಗಿತಗೊಂಡಿದೆ. ಗಬಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡೂ ಬದಿಯಲ್ಲೂ ಒಂದು ಕಿ.ಮೀ.ಗು ಹೆಚ್ಚು ದೂರದವರೆಗೆ ವಾಹನ ದಟ್ಟಣೆ ಉಂಟಾಗಿದೆ.
ಪೊಲೀಸರು, ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಸ್ಥಳೀಯರು ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗಕ್ಕೆ ತೆರಳುವ ವಾಹನಗಳು ಸೀಕೆ ರೋಡ್, ಕನ್ನಂಗಿ, ಹಣಗೆರೆ, ಆಯನೂರು ಮಾರ್ಗವಾಗಿ ಸಂಚರಿಸುತ್ತಿವೆ. ಆದರೆ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ತೆರಳುತ್ತಿರುವ ವಾಹನಗಳು ಪರ್ಯಾಯ ಮಾರ್ಗವಿಲ್ಲದೆ ರಸ್ತೆಯಲ್ಲೆ ನಿಂತಿವೆ.
ಇದನ್ನೂ ಓದಿ – ಹೆಚ್ಚಾಗಲಿಲ್ಲ ಭದ್ರಾ ಜಲಾಶಯದ ಒಳ ಹರಿವು, ಅಚ್ಚುಕಟ್ಟು ಭಾಗದ ರೈತರಲ್ಲಿ ತಳಮಳ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200